ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಮೇಲೆ ಪೊಲೀಸರು ಶುಕ್ರವಾರ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿಲುಮೆ ಕಚೇರಿ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಈ ಸಂಬಂಧ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ವಿರುದ್ಧ ಹಲಸೂರು ಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿತ್ತು. ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
2018ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ವೋಟರ್ಸ್ ಐಡಿ ಜಾಗೃತಿ ಬಗ್ಗೆ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಈ ವರ್ಷವೂ ಸಹ ಜಾಗೃತಿ ಕಾರ್ಯಕ್ರಮಕ್ಕೆ ಸಹ ಕೆಲವು ನಿರ್ಬಂಧನೆಯೊಂದಿಗೆ ಒಪ್ಪಿಗೆ ಸೂಚಿಸಲಾಗಿತ್ತು. ಈಗ ಷರತ್ತು ಉಲ್ಲಂಘನೆ ಆರೋಪದ ದೂರು ಬಂದ ನಂತರ ಚಿಲುಮೆ ಸಂಸ್ಥೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಕಾಂಗ್ರೆಸ್ನಿಂದ ಆರೋಪ
ಮತದಾರರ ಮಾಹಿತಿಯನ್ನು ಸರ್ಕಾರ ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಗುರುವಾರ ಾರೋಪಿಸಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲಾ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿದ್ದರು. ಮುಖ್ಯಮಂತ್ರಿ ಬೊಮ್ಮಾಯಿ ಮತದಾರರ ದತ್ತಾಂಶ ಕಳ್ಳತನದ ಜವಾಬ್ದಾರಿ ಹೊರಬೇಕು ಎಂದು ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ