ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಭೆಯ ನಂತರ ಇಂದಿನ ಬ್ಯಾಂಕ್ ಮುಷ್ಕರ ಮುಂದೂಡಿದ ಎಐಬಿಇಎ

ನವದೆಹಲಿ: ಅಖಿಲ ಭಾರತ ಬ್ಯಾಂಕ್‌ಗಳ ನೌಕರರ ಸಂಘ (ಎಐಬಿಇಎ) ನವೆಂಬರ್ 19 ರಂದು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಒಂದು ದಿನದ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ.
ಕಾರ್ಮಿಕ ಸಚಿವಾಲಯದ ಮುಖ್ಯ ಕಾರ್ಮಿಕ ಕಮಿಷನರ್ (ಸಿಎಲ್‌ಸಿ), ಭಾರತೀಯ ಬ್ಯಾಂಕ್‌ಗಳ ಸಂಘದೊಂದಿಗೆ ಸಭೆ ನಡೆಸಿದ ನಂತರ ಒಕ್ಕೂಟವು ಮುಷ್ಕರವನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆ (DFS). ಶುಕ್ರವಾರ ನಡೆದ ಚರ್ಚೆಯಲ್ಲಿ ಭಾಗವಹಿಸಿದ ಪಕ್ಷಗಳು ಎಲ್ಲಾ ವಿಷಯಗಳ ಬಗ್ಗೆ ಒಪ್ಪಂದಕ್ಕೆ ಬಂದವು.
ಭಾರತೀಯ ಬ್ಯಾಂಕ್‌ಗಳ ಸಂಘ (IBA) ಮತ್ತು ಬ್ಯಾಂಕ್ ಮ್ಯಾನೇಜ್‌ಮೆಂಟ್‌ಗಳು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಒಪ್ಪಿಕೊಂಡಿವೆ ಎಲ್ಲಾ ವಿಷಯಗಳ ಬಗ್ಗೆ ಒಂದು ಒಪ್ಪಂದಕ್ಕೆ ಬರಲಾಗಿದೆ. ಹೀಗಾಗಿ ನಮ್ಮ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ತಿಳಿಸಿದ್ದಾರೆ.

ಯೂನಿಯನ್‌ನಲ್ಲಿ ಸಕ್ರಿಯವಾಗಿರುವ ಬ್ಯಾಂಕರ್‌ಗಳ ತೊಂದರೆಗಳ ವಿರುದ್ಧ ಎಐಬಿಇಎ ಮುಷ್ಕರಕ್ಕೆ ಕರೆ ನೀಡಿತ್ತು. ಎಐಬಿಇಎ ವಾದವೆಂದರೆ ಬ್ಯಾಂಕ್ ಮ್ಯಾನೇಜ್‌ಮೆಂಟ್‌ಗಳು ವಿಶೇಷವಾಗಿ ಹೊರಗುತ್ತಿಗೆ ಮತ್ತು ಉದ್ಯೋಗಿಗಳ ವರ್ಗಾವಣೆಯಂತಹ ಕ್ಷೇತ್ರಗಳಲ್ಲಿ ನಿಬಂಧನೆಗಳನ್ನು ಉಲ್ಲಂಘಿಸುತ್ತಿವೆ. ಕಾರ್ಮಿಕ ಆಯುಕ್ತರ ಲೆಕ್ಕಪರಿಶೋಧನೆಯನ್ನು ಸಹ ಗೌರವಿಸುತ್ತಿಲ್ಲ ಎಂದು ಸಂಘವು ಆರೋಪಿಸಿದೆ.
ಈ ವಾರದ ಆರಂಭದಲ್ಲಿ, ಎಐಬಿಇಎಯು ಐಬಿಎ ಮತ್ತು 11 ಬ್ಯಾಂಕ್‌ಗಳ ಆಡಳಿತದೊಂದಿಗೆ ಸಭೆ ನಡೆಸಿತ್ತು, ಆದರೆ ಆ ಸಭೆಯಿಂದ ಯಾವುದೇ ಸಕಾರಾತ್ಮಕ ಫಲಿತಾಂಶವಿಲ್ಲ ಮತ್ತು ಸಂಘವು ತಮ್ಮ ಒಂದು ದಿನದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದುವರಿಸಲು ನಿರ್ಧರಿಸಿತ್ತು.

ಪ್ರಮುಖ ಸುದ್ದಿ :-   ವೀಡಿಯೊ...| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement