ಗುಜರಾತ್‌ ಚುನಾವಣೆ : 7 ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಿದ ಬಿಜೆಪಿ

ಗಾಂಧಿನಗರ: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ ನಿರಾಕರಿಸಿದ ನಂತರ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಭಾರತೀಯ ಜನತಾ ಪಕ್ಷ (ಬಿಜೆಪಿ) ಶಿಸ್ತು ಕ್ರಮ ಕೈಗೊಂಡು ಪಕ್ಷದ ಏಳು ಮುಖಂಡರನ್ನು ಬಿಜೆಪಿ ಅಮಾನತುಗೊಳಿಸಿದೆ.
ಎಲ್ಲಾ ಏಳು ಅಭ್ಯರ್ಥಿಗಳು ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಟಿಕೆಟ್ ಬಯಸಿದ್ದರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಈ ಶಾಸಕರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ ಹೇಳಿದ್ದಾರೆ.
ನರ್ಮದಾ ಜಿಲ್ಲೆಯ ನಂದೋಡ್‌ನ ಹರ್ಷದ್ ವಾಸವ ಸೇರಿದಂತೆ ಬಿಜೆಪಿ ನಾಯಕರನ್ನು ಅಮಾನತುಗೊಳಿಸಲಾಗಿದೆ. ಜುನಾಗಢದ ಕೇಶೋದ್ ಜುನಾಗಢದಿಂದ ಟಿಕೆಟ್ ಬಯಸಿದ್ದ ಅರವಿಂದ್ ಲಡಾನಿ, ಸುರೇಂದ್ರನಗರದ ಧಂಗದ್ರಾದಿಂದ ಛತ್ರಸಿಂಗ್ ಗುಂಜಾರಿಯಾ, ವಲ್ಸಾದ್‌ನ ಪರಡಿಯಿಂದ ಕೇತನ್ ಭಾಯಿ ಪಟೇಲ್, ರಾಜ್‌ಕೋಟ್ ಗ್ರಾಮಾಂತರದಿಂದ ಭರತ್ ಭಾಯಿ ಚಾವ್ಡಾ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್‌ನಿಂದ ಉದಯ್ ಭಾಯಿ ಶಾ ಮತ್ತು ಅಮ್ರೇಲಿಯ ರಾಜುಲಾದಿಂದ ಟಿಕೆಟ್ ಬಯಸಿದ್ದ ಕರಣ್ ಭಾಯಿ ಬಾರಯ್ಯ ಅಮಾನತುಗೊಂಡವರಾಗಿದ್ದಾರೆ.

ಗುಜರಾತಿನಲ್ಲಿ ಏಳನೇ ಅವಧಿಗೆ ಅಧಿಕಾರ ನಡೆಸಲು ಬಯಸುತ್ತಿರುವ ಬಿಜೆಪಿ 42 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ ಬಿಜೆಪಿ ಪಕ್ಷವು ಅದರಲ್ಲಿ 38 ಹಾಲಿ ಶಾಸಕರನ್ನು ಕೈಬಿಟ್ಟಿದೆ. ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಹಲವು ಪಕ್ಷದ ಪ್ರಮುಖರಿಗೆ ಟಿಕೆಟ್ ನಿರಾಕರಿಸಲಾಗಿದೆ.
2017ರ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ 182 ಸ್ಥಾನಗಳ ಪೈಕಿ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಪಕ್ಷವು ಕಳೆದ 27 ವರ್ಷಗಳಿಂದ ಅಧಿಕಾರದಲ್ಲಿದೆ ಮತ್ತು 2014 ರಲ್ಲಿ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗುವ ಮೊದಲು ನರೇಂದ್ರ ಮೋದಿ ಅವರು ರಾಜ್ಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿದ್ದಾರೆ.
ಈ ಬಾರಿ, ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಸಿಆರ್ ಪಾಟೀಲ ನಾಯಕತ್ವದಲ್ಲಿ ಪಕ್ಷವು ತನ್ನ ಅತ್ಯಧಿಕ ಸ್ಥಾನಗಳ ಸಂಖ್ಯೆ 140 ಸ್ಥಾನ ಮೀರಿ ಗೆಲ್ಲುವ ಗುರಿಯನ್ನು ಹೊಂದಿದೆ. ರಾಜ್ಯವು ಹಿಂದಿನಿಂದಲೂ ಬಿಜೆಪಿ ಭದ್ರಕೋಟೆಯಾಗಿದ್ದು, ಏಳನೇ ಅವಧಿಗೆ ಮತ್ತೆ ಅಧಿಕಾರಕ್ಕೆ ಬರಲು ಪಕ್ಷವು ಗುರಿ ಹೊಂದಿದೆ.
182 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಗುಜರಾತ್ ರಾಜ್ಯದಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement