ಧಾರ್ಮಿಕ ಮೆರವಣಿಗೆಗೆ ನುಗ್ಗಿದ ಟ್ರಕ್‌: ಮಕ್ಕಳು ಸೇರಿ ಕನಿಷ್ಠ 12 ಮಂದಿ ಸಾವು

ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಜನಸಮೂಹದ ಮೇಲೆ ವೇಗವಾಗಿ ಬಂದ ಟ್ರಕ್ ನುಗ್ಗಿದ ಪರಿಣಾಮ ಹಲವಾರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ವೈಶಾಲಿ ಜಿಲ್ಲೆಯ ಮೆಹನಾರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ್ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಾರಣಾಂತಿಕ ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾದವು. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 55-60 ಕಿಮೀ ದೂರದಲ್ಲಿರುವ ಸುಲ್ತಾನ್‌ಪುರ ಗ್ರಾಮದ ಬಳಿ ಸಂತ್ರಸ್ತರು ರಾತ್ರಿ 9 ಗಂಟೆ ಸುಮಾರಿಗೆ ಔತಣಕೂಟವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಟ್ರಕ್ ಚಾಲಕ ಮತ್ತು ಸಹಾಯಕನನ್ನು ಬಂಧಿಸಿದ್ದಾರೆ. ಚಾಲಕ ಪಾನಮತ್ತನಾಗಿದ್ದಾನೋ ಇಲ್ಲವೋ ಎಂಬುದು ವೈದ್ಯಕೀಯ ಪರೀಕ್ಷೆಯ ನಂತರವಷ್ಟೇ ಗೊತ್ತಾಗಲಿದೆ ಎಂದು ವೈಶಾಲಿ ಎಸ್ಪಿ ತಿಳಿಸಿದ್ದಾರೆ.
ವೈಶಾಲಿ ಪೊಲೀಸ್ ಅಧೀಕ್ಷಕ ಮನೀಶಕುಮಾರ್, “ಮದುವೆಗಳಿಗೆ ಸಂಬಂಧಿಸಿದ ಸಂಪ್ರದಾಯದ ಭಾಗವಾಗಿ ಮೆರವಣಿಗೆನಡೆಯುತ್ತಿತ್ತು. ಹತ್ತಿರದ ಸುಲ್ತಾನ್‌ಪುರ ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಕೆಲವೇ ದಿನಗಳಲ್ಲಿ ಮದುವೆಯನ್ನು ನಿಗದಿಪಡಿಸಲಾಗಿತ್ತು. ವೇಗವಾಗಿ ಹೋಗುತ್ತಿದ್ದ ಟ್ರಕ್ ಚಾಲಕ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿದೆ ಎಂದು ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ಇಂಟರ್‌ಪೋಲ್‌ನ ವಾಂಟೆಡ್ ಪಟ್ಟಿಯಿಂದ ಮೆಹುಲ್ ಚೋಕ್ಸಿ ಹೊರಕ್ಕೆ : ಜಗತ್ತಿನಾದ್ಯಂತ ಮುಕ್ತವಾಗಿ ಪ್ರಯಾಣಿಸಬಹುದು-ವರದಿ

ರಾತ್ರಿ 9 ಗಂಟೆಯ ಸುಮಾರಿಗೆ ಮೆರವಣಿಗೆಯು ರಸ್ತೆಬದಿಯಲ್ಲಿರುವ ಮರದ ಮುಂದೆ ಸ್ಥಳೀಯ ದೇವತೆ ‘ಭೂಮಿಯಾ ಬಾಬಾಗೆ ಪ್ರಾರ್ಥನೆ ಸಲ್ಲಿಸಲು ಜನ ಜಮಾಯಿಸಿದಾಗ ಅಪಘಾತ ಸಂಭವಿಸಿದೆ.
ಶಾಸಕ ಮುಖೇಶ್ ರೌಶನ್ ಅವರು ಪ್ರದೇಶಕ್ಕೆ ಧಾವಿಸಿದ್ದಾರೆ. “ಕನಿಷ್ಠ ಒಂಬತ್ತು ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇತರರನ್ನು ಹಾಜಿಪುರ (ಜಿಲ್ಲಾ ಕೇಂದ್ರ) ನಲ್ಲಿರುವ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮತ್ತು ದಾರಿಯಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಸ್ಥಿತಿ ಗಂಭೀರವಾಗಿರುವವರನ್ನು ಪಾಟ್ನಾದ ಆಸ್ಪತ್ರೆಗಳಿಗೆ ತವಾನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement