ನವದೆಹಲಿ: ಬಬ್ಬರ್ ಖಾಲ್ಸಾ ಇಂಟರ್ನ್ಯಾಶನಲ್ (ಬಿಕೆಐ) ಮತ್ತು ಖಲಿಸ್ತಾನ್ ಲಿಬರೇಶನ್ ಫೋರ್ಸ್ (ಕೆಎಲ್ಎಫ್) ನಂತಹ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಕುಲ್ವಿಂದರ್ಜಿತ್ ಸಿಂಗ್ ಅಲಿಯಾಸ್ “ಖಾನ್ಪುರಿಯಾ” ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಸೋಮವಾರ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
2019ರಿಂದ ತಲೆಮರೆಸಿಕೊಂಡಿದ್ದ ಕುಲ್ವಿಂದರ್ಜಿತ್, ಹಲವು ಭಯೋತ್ಪಾದಕ ಪ್ರಕರಣಗಳಲ್ಲಿ ಮತ್ತು ಪಂಜಾಬ್ನಲ್ಲಿ ಉದ್ದೇಶಿತ ಹತ್ಯೆಗಳನ್ನು ನಡೆಸುವ ಸಂಚಿನಲ್ಲಿ ಭಾಗಿಯಾಗಿದ್ದ. ಆತನ ಬಂಧನದ ಬಗ್ಗೆ ಮಾಹಿತಿ ನೀಡಿದವರಿಗೆ ತನಿಖಾ ಸಂಸ್ಥೆ ಐದು ಲಕ್ಷ ರೂಪಾಯಿ ನಗದು ಬಹುಮಾನವನ್ನೂ ಘೋಷಿಸಿತ್ತು.
ಮೇ 30, 2019 ರಂದು ಅಮೃತಸರದ ರಾಜ್ಯ ವಿಶೇಷ ಕಾರ್ಯಾಚರಣೆ ಸೆಲ್ನ ಪೊಲೀಸ್ ಠಾಣೆಯಲ್ಲಿ ಆರಂಭದಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯ ಸಮಯದಲ್ಲಿ ಆತನ ವಿರುದ್ಧ ಲುಕ್ ಔಟ್ ಸುತ್ತೋಲೆ ಮತ್ತು ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಇದಕ್ಕೂ ಮೊದಲು, ಖಾನ್ಪುರಿಯಾ ಜೊತೆ ಸಂಚು ರೂಪಿಸಿದ್ದ ನಾಲ್ವರು ಸಹ ಆರೋಪಿಗಳನ್ನು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ನಂತರ ಈಗಾಗಲೇ ಬಂಧಿಸಲಾಗಿತ್ತು.
ಬಂಧಿತ ಭಯೋತ್ಪಾದಕ ಪಂಜಾಬ್ನಲ್ಲಿ ಉದ್ದೇಶಿತ ಹತ್ಯೆಗಳನ್ನು ನಡೆಸುವ ಸಂಚು ಸೇರಿದಂತೆ ಹಲವು ಭಯೋತ್ಪಾದಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು ಏಜೆನ್ಸಿಗಳಿಗೆ ಬೇಕಾಗಿದ್ದ. ಈತ ನವದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಬಾಂಬ್ ಸ್ಫೋಟ ಪ್ರಕರಣ ಮತ್ತು 1990 ರ ದಶಕದಲ್ಲಿ ಇತರ ರಾಜ್ಯಗಳಲ್ಲಿ ಗ್ರೆನೇಡ್ ದಾಳಿಯಲ್ಲೂ ಭಾಗಿಯಾಗಿದ್ದ. ಅಧಿಕಾರಿ ಹೇಳಿದರು.
ಎನ್ಐಎಯ ಅಧಿಕಾರಿಯ ಪ್ರಕಾರ, ಡೇರಾ ಸಚ್ಚಾ ಸೌದಾ ಮತ್ತು ಪಂಜಾಬ್ ಪೊಲೀಸ್ ಮತ್ತು ಭದ್ರತೆಗೆ ಸಂಬಂಧಿಸಿದ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸುವ ಯೋಜನೆಯ ಹಿಂದಿನ ಸಂಚುಕೋರ ಮತ್ತು ಮಾಸ್ಟರ್ಮೈಂಡ್ ಈ ಖಾನ್ಪೂರಿಯಾ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಪಂಜಾಬ್ ಮತ್ತು ರಾಷ್ಟ್ರದಾದ್ಯಂತ ಭಯೋತ್ಪಾದನೆಯನ್ನು ಉಂಟುಮಾಡುವ ಒಟ್ಟಾರೆ ಗುರಿಯೊಂದಿಗೆ ಚಂಡೀಗಢದ ಭಾಕ್ರಾ ಬಿಯಾಸ್ ನಿರ್ವಹಣಾ ಮಂಡಳಿಯ ಹಿರಿಯ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಖಾನ್ಪುರಿಯಾ, ಭಾರತ ಮತ್ತು ವಿದೇಶಗಳಲ್ಲಿ ನೆಲೆಸಿರುವ ತನ್ನ ಹ್ಯಾಂಡ್ಲರ್ಗಳು ಮತ್ತು ಸಹಚರರೊಂದಿಗೆ ವಿವಿಧ ಆಗ್ನೇಯ ಏಷ್ಯಾದ ದೇಶಗಳಲ್ಲಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಯೋಜಿಸಿದ್ದ ಮತ್ತು ಸಂಚು ರೂಪಿಸಿದ್ದ. ನಂತರ ಅವರು ದೇಶದಿಂದ ಪಲಾಯನ ಮಾಡುವಲ್ಲಿ ಯಶಸ್ವಿಯಾದ ಎಂದು ಅಧಿಕಾರಿ ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ