ಕುಮಟಾ: ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಕ್ತಿ ಸ್ಥಳಗಳಲ್ಲೊಂದಾದ ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇವಿಗೆ ಪೂಜೆ ಸಲ್ಲಿಸಿದರು.
ಕುಮಟಾ ಕಾಂಗ್ರೆಸ್‌ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ ಅವರು ಪೂಜೆ ಸಲ್ಲಿಸಿ ಶ್ರೀ ದೇವಿಯ ಆಶೀರ್ವಾದ ಬೇಡಿದರು. ದೇವಾಲಯದ ಆಡಳಿತ ಕಮಿಟಿಯ ಕಾರ್ಯದರ್ಶಿ ಸೀತಾರಾಮ ಭಟ್‌,ವಿ.ಜಿ.ಹೆಗಡೆ, ಡಾ.ದಯಾನಂದ ಭಟ್‌, ಜಯರಾಮ ಭಟ್‌ ಗುಡಬಳ್ಳಿ, ನಾಗರಾಜ ಜೋಶಿ ಗುಡಬಳ್ಳಿ, ಶ್ರೀಧರ ಭಟ್‌ ಗುಡಬಳ್ಳಿ, ವಿನಾಯಕ ಜೋಶಿ , ಮುಖ್ಯ ಅರ್ಚಕ ಗಣಪತಿ ಸಭಾಹಿತ, ಗೋಪಾಲ ಭಟ್‌ ಹಾಗೂ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಡಿ.ಕೆ ಶಿವಕುಮಾರ ಅವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಶಿವಕುಮಾರ ಅವರೊಂದಿಗೆ ಡಾ. ಶಂಕರ ಗುಹಾ, ಮಾಜಿ ಸಚಿವ ಆರ್‌.ವಿ.ದೇಶಪಾಂಡೆ, ಮಾಜಿ ಶಾಸಕರಾದ ಮಂಕಾಳ ವೈದ್ಯ ಹಾಗೂ ಶಾರದಾ ಶೆಟ್ಟಿ, ಕಾಂಗ್ರೆಸ್‌ ಮುಖಂಡ ಶಿವಾನಂದ ಹೆಗಡೆ ಮೊದಲಾದವರಿದ್ದರು.

 

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement