ತೆಲಂಗಾಣ ಶಾಸಕರ ಆಮಿಷ ಪ್ರಕರಣ: ಬಿಎಲ್‌ ಸಂತೋಷ ವಿಚಾರಣೆಗೆ ತೆಲಂಗಾಣ ಹೈಕೋರ್ಟ್‌ ತಡೆ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ ಅವರನ್ನು ಸದ್ಯಕ್ಕೆ ಪ್ರಶ್ನಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತಿಳಿಸಿದೆ.
ಬಿ.ಎಲ್‌. ಸಂತೋಷ ಅವರಿಗೆ ನೀಡಲಾದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ಗೆ ಡಿಸೆಂಬರ್ 5 ರವರೆಗೆ ತಡೆಯಾಜ್ಞೆ ನೀಡಿದೆ. ತೆಲಂಗಾಣ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ ಅವರಿಗೆ ನವೆಂಬರ್ 26 ಅಥವಾ ನವೆಂಬರ್ 28 ರಂದು ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್ ನೀಡಿದ ನಂತರ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅವರು ತನಿಖಾ ತಂಡದ ಮುಂದೆ ಇನ್ನೂ ಹಾಜರಾಗಿಲ್ಲ.
ಸಂತೋಷ ಅವರು ಗುಜರಾತ್‌ ಚುನಾವಣಾ ಸಂಬಂಧಿತ ಕೆಲಸದಲ್ಲಿ ನಿರತರಾಗಿದ್ದು, ನವೆಂಬರ್ 16 ರಂದು ಮೊದಲ ನೋಟಿಸ್ ಸ್ವೀಕರಿಸಲಿಲ್ಲ. ನಂತರ ನ್ಯಾಯಾಲಯವು ಅವರಿಗೆ ಇ-ಮೇಲ್ ಮತ್ತು ವಾಟ್ಸಪ್ ಮೂಲಕ ಕಳುಹಿಸಬಹುದು ಎಂದು ಹೇಳಿತು. ಆಗ ನವೆಂಬರ್ 26 ಅಥವಾ ನವೆಂಬರ್ 28 ರಂದು ವಿಚಾರಣೆಗಾಗಿ ಎಸ್‌ಐಟಿ ಮುಂದೆ ಹಾಜರಾಗುವಂತೆ ಮತ್ತೊಂದು ನೋಟಿಸ್‌ ನೀಡಲಾಯಿತು. ಈಗ ಅದಕ್ಕೆ ತೆಲಂಗಾಣ ಹೈಕೋರ್ಟ್‌ ಡಿಸೆಂಬರ್ 5ರ ವರೆಗೆ ತಡೆ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಈ ಮೆಸೇಜ್‌ ನಿಮಗೂ ಬರಬಹುದು ಎಚ್ಚರ : ಮೊಬೈಲಿಗೆ ಬಂದ ವಿದ್ಯುತ್ ಬಿಲ್ ಸಂದೇಶಕ್ಕೆ ಉತ್ತರಿಸಿ ಲಕ್ಷಾಂತರ ರೂ.ಕಳೆದುಕೊಂಡ ಮಹಿಳೆ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement