ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

ಇಂದೋರ್‌ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಆರೋಪಿಯನ್ನು ದಯಾ ಅಲಿಯಾಸ್ ಪ್ಯಾರೆ ಅಲಿಯಾಸ್ ನರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ಉಜ್ಜಯಿನಿ ಜಿಲ್ಲೆಯ ನಗ್ಡಾ ಪ್ರದೇಶದಲ್ಲಿ ಬಂಧಿಸಿ ಇಂದೋರ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗೆ ಇಂದೋರ್‌ಗೆ ಆಗಮಿಸಿದ ತಕ್ಷಣ ಬಾಂಬ್ ಸ್ಫೋಟಿಸುವುದಾಗಿ ಈತ ಬೆದರಿಕೆ ಪತ್ರ ಬರೆದಿದ್ದ ಎಂದು ಆರೋಪಿಸಲಾಗಿದೆ.

ಪೊಲೀಸರು ಕನಿಷ್ಠ 200 ಸಿಸಿಟಿವಿಗಳನ್ನು ಪರಿಶೀಲಿಸಿದರು ಮತ್ತು ಅರ್ಧ ಡಜನ್ ನಗರಗಳಲ್ಲಿನ ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ರೈಲ್ವೆ ನಿಲ್ದಾಣಗಳ ಮೇಲೆ ದಾಳಿ ನಡೆಸಿದರು.ಆರೋಪಿ ಉತ್ತರ ಪ್ರದೇಶದ ರಾಯಬರೇಲಿ ಮೂಲದವನಾಗಿದ್ದು, ಈ ಹಿಂದೆಯೂ ಪತ್ರ ಮತ್ತು ದೂರವಾಣಿ ಕರೆಗಳ ಮೂಲಕ ಹಲವರಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಯು ಇಂದೋರ್‌ನ ಖಾಲ್ಸಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಹಾಜರಿದ್ದ, ಅಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಕೂಡ ಉಪಸ್ಥಿತರಿದ್ದರು.

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement