ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಅನ್ಯಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಕಿದ್ದ ಪೋಸ್ಟರ್ ಅನ್ನು ಜಿಲ್ಲಾಡಳಿತ ತೆರವುಗೊಳಿಸಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 5ರಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈ ಪೋಸ್ಟರ್ ಹಾಕಲಾಗಿತ್ತು. ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಅಂಜನಾದ್ರಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಮಾಲಾಧಾರಿಗಳು ಆಗಮಿಸುತ್ತಾರೆ. ಹೀಗಾಗಿ ಅಂದು ಕಾರ್ಯಕ್ರಮದಲ್ಲಿ ಹಿಂದೂಯೇತರರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಫ್ಲೆಕ್ಸ್ ಹಾಕಿದ್ದರು.
ಅಂಜನಾದ್ರಿಯಲ್ಲಿ ಅನ್ಯ ಧರ್ಮದವರು ವ್ಯಾಪಾರ ವಹಿವಾಟು ಮಾಡಬಾರದು. ಹಿಂದುಗಳ ಕ್ಷೇತ್ರದಲ್ಲಿ ಹಿಂದುಗಳೇ ವ್ಯಾಪಾರ ಮಾಡಬೇಕು. ಅನ್ಯಧರ್ಮೀಯರ ವ್ಯಾಪಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಬಾರದು ಎಂದು ಕೋರಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಹ ಸಲ್ಲಿಸಿದ್ದರು. ಈಗ ಜಿಲ್ಲಾಡಳಿತ ಬ್ಯಾನರ್ ತೆರವು ಮಾಡಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ