ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚಳಿಗಾಲದ ಬಟ್ಟೆಗಳನ್ನು ವಿತರಿಸಲು ಮಂಗಳವಾರ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸಿದರು. ಆದರೆ ಅದು ಇನ್ನೂ ಸ್ಥಳಕ್ಕೆ ತಲುಪಿಲ್ಲ ಎಂದು ತಿಳಿದ ನಂತರ ಅವರು ತಮ್ಮ ಶಾಂತತೆ ಕಳೆದುಕೊಂಡರು ಮತ್ತು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಮುಖ್ಯಮಂತ್ರಿ ಚಳಿಗಾಲದ ಬಟ್ಟೆಗಳನ್ನು ವಿತರಿಸಲು ಉತ್ತರ 24 ಪರಗಣ ಜಿಲ್ಲೆಯಲ್ಲಿದ್ದರು. ಸಿಟ್ಟು ಗೋಚರವಾಗುವಂತೆ ಕೋಪಗೊಂಡ ಮಮತಾ ಬ್ಯಾನರ್ಜಿ ಅವರು ತಮ್ಮ ಭಾಷಣ ನಿಲ್ಲಿಸಿದರು ಮತ್ತು ಸಾರ್ವಜನಿಕವಾಗಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರನ್ನು ಕರೆದು ತರಾಟೆಗೆ ತೆಗೆದುಕೊಂಡರು.
ಕಾರ್ಯಕ್ರಮದ ಸ್ಥಳದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಮತ್ತು ಬಂಗಾಳದ ಮುಖ್ಯ ಕಾರ್ಯದರ್ಶಿ ಡಾ ಹರಿ ಕೃಷ್ಣ ದ್ವಿವೇದಿ ಉಪಸ್ಥಿತರಿದ್ದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಮಮತಾ ಬ್ಯಾನರ್ಜಿ ಅವರು ವೇದಿಕೆಗೆ ತಕ್ಷಣವೇ 15,000 ಬಟ್ಟೆಗಳನ್ನು ತರುವಂತೆ ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ ಆದೇಶಿಸಿದರು. ಈ ಬಟ್ಟೆಗಳನ್ನು ವೇದಿಕೆಯ ಬದಲಾಗಿ ಬ್ಲಾಕ್ ಡೆವಲಪ್ ಮೆಂಟ್ ಆಫೀಸರ್ (ಬಿಡಿಒ) ಕಚೇರಿಯಲ್ಲಿ ಇಡಲಾಗಿತ್ತು. ನಂತರ ಸಾಮಗ್ರಿಗಳು ಬರುವವರೆಗೆ 18 ನಿಮಿಷ ಕಾದು ಅದು ಬಂದ ನಂತರ ಸಾರ್ವಜನಿಕರಿಗೆ ವಿತರಿಸಿದರು.
“ಬೆಚ್ಚಗಿನ ಬಟ್ಟೆ ಬರುವವರೆಗೆ ನಾನು ವೇದಿಕೆಯ ಮೇಲೆ ಕಾಯುತ್ತೇನೆ, ಅವರು ಬಿಡಿಒ ಕಚೇರಿಯಲ್ಲಿ ಏಕೆ ಮಲಗಿದ್ದಾರೆ?” ಎಂದು ಪ್ರಶ್ನಿಸಿದರು.
ಬಟ್ಟೆ ಬರುವುದನ್ನೇ ಕಾಯುತ್ತಿದ್ದಾಗ ಇನ್ಸ್ ಪೆಕ್ಟರ್ ಅಥವಾ ಜಿಲ್ಲಾಧಿಕಾರಿ ಯಾರೇ ಆದರೂ ಸರಿಯಾಗಿ ಕೆಲಸ ಮಾಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮುಂದಿನ ದಿನದಲ್ಲಿ, ಮುಖ್ಯಮಂತ್ರಿಗಳು ಸುಂದರಬನ್ಸ್ ಮತ್ತು ಬಸಿರ್ಹತ್ ಅನ್ನು ದಕ್ಷಿಣ ಮತ್ತು ಉತ್ತರ 24 ಪರಗಣಗಳಿಂದ ರಚಿಸಲಾದ ಎರಡು ಹೊಸ ಜಿಲ್ಲೆಗಳಾಗಿ ಅಧಿಕೃತವಾಗಿ ಘೋಷಿಸುವ ನಿರೀಕ್ಷೆಯಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ