ಧಾರವಾಡ: ಇಲ್ಲಿನ ಜೆ.ಎಸ್.ಎಸ್ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 75ನೇ ಜನ್ಮದಿನದ ಪ್ರಯುಕ್ತ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳವನ್ನು ಡಿಸೆಂಬರ್ 18ರ ಭಾನುವಾರ ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ (ಜೆ.ಎಸ್.ಎಸ್ ) ಕ್ಯಾಂಪಸ್ನಲ್ಲಿ ಆಯೋಜಿಸಲಾಗಿದೆ.
ಧಾರವಾಡದ ರ್ಯಾಪಿಡ್ ಸಂಸ್ಥೆ, ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಈ ಮಹಿಳೆಯರಿಗಾಗಿ ಮೀಸಲಾದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇತರೆ ಟೇಲರಿಂಗ್, ಕಸೂತಿ ಕೌಶಲ್ಯ ಹೊಂದಿದ ಮಹಿಳೆಯರು, ವಿದ್ಯಾರ್ಥಿನಿಯರು ಭಾಗವಹಿಸಬಹುದು ಎಂದು ತಿಳಿಸಲಾಗಿದೆ.
ಅಲ್ಲದೆ ಹೆಲ್ಪರ್, ಕ್ಲೀನರ್ ಮತ್ತು ಹೌಸ್ ಕೀಪಿಂಗ್ ಉದ್ಯೋಗಗಳಿಗೆ ನೇಮಕಾತಿ ನಡೆಯಲಿದೆ. ಮಹಿಳಾ ಉದ್ಯೋಗದಾತರು ಸಹ ತಮ್ಮಲ್ಲಿ ಮಹಿಳೆಯರಿಗಾಗಿ ಯಾವುದಾದರೂ ಉದ್ಯೋಗಗಳು ಖಾಲಿ ಇದ್ದಲ್ಲಿ ಈ ಮೇಳದಲ್ಲಿ ಭಾಗವಹಿಸಬಹುದು. ಭಾಗವಹಿಸಲು ಇಚ್ಛಿಸುವ ಕಂಪನಿ ಪ್ರತಿನಿಧಿಗಳು ಹಾಗೂ ಮಹಿಳಾ ಅಭ್ಯರ್ಥಿಗಳು ಡಿಸೆಂಬರ್ 14ರ ಒಳಗಾಗಿ ಬೆಳಿಗ್ಗೆ 10:30 ರಿಂದ ಸಂಜೆ 5:30ರ ಒಳಗೆ 0836-3566952/8073831784ಕ್ಕೆ ಕರೆ ಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ