ಕಡಿಮೆ ಅಂಕ ಪಡೆದ ವಿಷಯ ಪೋಷಕರಿಗೆ ತಿಳಿಸಿದ್ದಕ್ಕೆ ಗರ್ಭಿಣಿ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಶಾಲಾ ವಿದ್ಯಾರ್ಥಿಗಳು…!

ಸಿಲ್ಚಾರ್: ಇತ್ತೀಚಿನ ಪರೀಕ್ಷೆಯಲ್ಲಿ ತಮ್ಮ ಕಡಿಮೆ ಅಂಕಗಳ ಬಗ್ಗೆ ಚರ್ಚಿಸಲು ತಮ್ಮ ಪೋಷಕರನ್ನು ಕರೆದು ಮಾಹಿತಿ ನೀಡಿದ್ದಕ್ಕಾಗಿ ಗರ್ಭಿಣಿ ಶಿಕ್ಷಕಿಯೊಬ್ಬರ ಮೇಲೆ ಅಸ್ಸಾಂನ ದಿಬ್ರುಗಢದಲ್ಲಿಯ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ಗುಂಪಾಗಿ ಹಲ್ಲೆ ನಡೆಸಿದ್ದು, ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗೂ ಘಟನೆ ಸಂಬಂಧ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಗರ್ಭಿಣಿಯಾಗಿರುವ ಇತಿಹಾಸ ಶಿಕ್ಷಕಿ ವಿದ್ಯಾರ್ಥಿಗಳ ವರ್ತನೆಯ ಬಗ್ಗೆ ಔಪಚಾರಿಕವಾಗಿ ದೂರು ನೀಡಿದ ನಂತರ 22 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಆದರೆ, ಶಿಕ್ಷಕಿ ಪೊಲೀಸ್ ದೂರು ನೀಡಲು ನಿರಾಕರಿಸಿದ್ದಾರೆ.
ಕೆಲವು ವಿದ್ಯಾರ್ಥಿಗಳ ಕಡಿಮೆ ಅಂಕಗಳನ್ನು ಪಡೆದ ಬಗ್ಗೆ ಚರ್ಚಿಸಲು ಅವರು ಕರೆದ ಪೋಷಕರು-ಶಿಕ್ಷಕರ ಸಭೆಯ ನಂತರ ಭಾನುವಾರ ಸಂಜೆ ಈ ಘಟನೆ ನಡೆದಿದೆ ಎಂದು ಶಾಲೆಯ ನೌಕರರು ತಿಳಿಸಿದ್ದಾರೆ. ಶಾಲೆಯ ಕ್ಯಾಂಪಸ್‌ನಿಂದ ಹೊರಬಂದಾಗ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪುಗೂಡಿದರು. ಅವರು ನಿಂದನೀಯ ಭಾಷೆಯನ್ನು ಬಳಸಿದರು, ಶಿಕ್ಷಕಿಯನ್ನು ತಳ್ಳಿದರು ಮತ್ತು ಬೆದರಿಕೆ ಹಾಕಿದರು. ಶಾಲೆಯ ಇತರ ಸಿಬ್ಬಂದಿ, ಪ್ರಾಂಶುಪಾಲರು ಮತ್ತು ಕೆಲವು ವಿದ್ಯಾರ್ಥಿಗಳು ಶಿಕ್ಷಕಿಯ ರಕ್ಷಣೆಗೆ ಬಂದರು ಎಂದು ಉದ್ಯೋಗಿ ಹೇಳಿದರು ಎಂದು ವರದಿ ತಿಳಿಸಿದೆ.

ಗರ್ಭಿಣಿ ಶಿಕ್ಷಕಿಯನ್ನು ರಕ್ಷಿಸಲು ಪ್ರಯತ್ನಿಸಿದ ಪ್ರಾಂಶುಪಾಲರು ಮತ್ತು ಇತರ ಕೆಲವು ಶಿಕ್ಷಕರನ್ನು ಸಹ ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳು ಇದುವರೆಗೆ 22 ವಿದ್ಯಾರ್ಥಿಗಳನ್ನು ಗುರುತಿಸಿದ್ದಾರೆ. “ಅವರು ಹೆಚ್ಚಾಗಿ 9 ಮತ್ತು 10 ನೇ ತರಗತಿಯಿಂದ ಬಂದವರು… ಅವರು ಯಾವ ರೀತಿಯ ಶಿಕ್ಷೆಗೆ ಅರ್ಹರು ಎಂಬುದನ್ನು ನಾವು ಚರ್ಚಿಸುತ್ತೇವೆ” ಎಂದು ಶಾಲೆಯ ಅಧಿಕಾರಿಯೊಬ್ಬರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಒಂದು ಹಂತದಲ್ಲಿ, ಅವರು ನನ್ನ ಕ್ವಾರ್ಟರ್ಸ್ ಪ್ರವೇಶಿಸುವ ಬೆದರಿಕೆ ಹಾಕಿದರು. ಅವರು ನಮ್ಮ ವಿದ್ಯಾರ್ಥಿಗಳಾಗಿರುವುದರಿಂದ ನಾವು ಪೊಲೀಸರಿಗೆ ದೂರು ನೀಡಲಿಲ್ಲ ಎಂದು ಉಪ ಪ್ರಾಂಶುಪಾಲ ರತೀಸ್ ಕುಮಾರ್ ಹೇಳಿದ್ದಾರೆ.
ಘಟನೆಯ ಬಗ್ಗೆ ನಮಗೆ ತಿಳಿದಿದೆ. ಆದರೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಬೆಳವಣಿಗೆಗಳ ಮೇಲೆ ನಿಗಾ ಇಡುತ್ತೇವೆ ಆದರೆ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

ಇದು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಂಸಾಚಾರ ಅಥವಾ ರ್ಯಾಗಿಂಗ್ ವರದಿಯಾದ ಮೂರನೇ ಘಟನೆಯಾಗಿದೆ.
ಭಾನುವಾರ ರಾತ್ರಿ, ದಿಬ್ರುಗಢ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಹಿರಿಯರ ರ್ಯಾಗಿಂಗ್‌ನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ದಿಬ್ರುಗಢ್ ಪೊಲೀಸ್ ವರಿಷ್ಠಾಧಿಕಾರಿ ಶ್ವೇತಾಂಕ್ ಮಿಶ್ರಾ ತಿಳಿಸಿದ್ದಾರೆ. “ಈ ಸಂಬಂಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು 5 ವಿದ್ಯಾರ್ಥಿಗಳ ಮೇಲೆ ಆರೋಪ ಮಾಡಲಾಗಿದೆ. ನಾವು ಅವರಲ್ಲಿ ಇಬ್ಬರನ್ನು ಬಂಧಿಸಿದ್ದೇವೆ. ನಮ್ಮ ತನಿಖೆಯಲ್ಲಿ, ಇನ್ನೂ ಕೆಲವು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆಂದು ನಾವು ಕಂಡುಕೊಂಡಿದ್ದೇವೆ ಮತ್ತು ನಾವು ಇನ್ನೂ ಇಬ್ಬರನ್ನು ಬಂಧಿಸಿದ್ದೇವೆ ಎಂದು ಮಿಶ್ರಾ ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ವಿದ್ಯಾರ್ಥಿಯ ದುರಂತ ಸಾವಿಗೆ ದಿಬ್ರುಗಢ ವಿಶ್ವವಿದ್ಯಾಲಯವನ್ನು ದೂಷಿಸಿದ್ದಾರೆ, ವಿದ್ಯಾರ್ಥಿಯು ಸೆಪ್ಟೆಂಬರ್‌ನಲ್ಲಿ ಅದರ ಬಗ್ಗೆ ದೂರು ನೀಡಿದ್ದರೂ ವಿಶ್ವವಿದ್ಯಾಲಯದ ಅಧಿಕಾರಿಗಳು ಅದರ ಬಗ್ಗೆ ಗಮನ ಹರಿಸಲಿಲ್ಲ ಎಂದು ಹೇಳಿದರು.
ವಿಶ್ವವಿದ್ಯಾನಿಲಯವು 18 ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಂಡಿದೆ ಮತ್ತು ಇನ್ನೂ ಕೆಲವು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ದಿಬ್ರುಗಢ್‌ನ ಅಸ್ಸಾಂ ವೈದ್ಯಕೀಯ ಕಾಲೇಜಿನ (ಎಎಮ್‌ಸಿ) ಇಬ್ಬರು ವಿದ್ಯಾರ್ಥಿಗಳನ್ನು ಮಂಗಳವಾರ ರ ರ್ಯಾಗಿಂಗ್‌ ಮಾಡಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ಸಂಸ್ಥೆಯ ರ್ಯಾಗಿಂಗ್ ವಿರೋಧಿ ಸಮಿತಿಯ ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ...!

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement