ಮೈಸೂರು: ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಯಾರೋ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಗರದ ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ರಂಗಾಯಣದಿಂದ ಟಿಪ್ಪು ನಿಜಕನಸುಗಳು ಎಂಬ ನಾಟಕ ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ. ನವೆಂಬರ್ 28ರಂದು ಶಿವಮೊಗ್ಗ ಜಿಲ್ಲೆಯ ವಿಳಾಸದಿಂದ ಪತ್ರವೊಂದು ಬಂದಿದ್ದು, ಈ ಪತ್ರದಲ್ಲೂ ಅವಾಚ್ಯ ಶಬ್ದಗಳ ನಿಂದನೆಯಿದ್ದು, ನಿನಗೀಗ ಸಾಯುವ, ಕೊಲೆ ಆಗುವ ಹಂತ ತಲುಪಿದ್ದೀಯಾ, ನಿನ್ನನ್ನು ನೀವು ನಂಬಿರುವ ದೇವರು ಸಹ ಕಾಪಾಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ