ಬೆಂಗಳೂರು: ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಹೋದ ವೇಳೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕ ಇಂದು, ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಇಬ್ಬರು ಮಕ್ಕಳಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬಾಲಕ ಸುಪ್ರಿತ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಮನೆಯ ಮಹಡಿಗೆ ಬಂದ ಪಾರಿವಾಳವನ್ನು ಹಿಡಿಯಲು ಮಹಡಿಗೆ ಹೋದ ಮಕ್ಕಳು ಹೋಗಿದ್ದಾರೆ. ಮನೆಯ ಬಳಿ ಹಾದು ಹೋದ ಹೈಟೆನ್ಶನ್ ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಇಬ್ಬರು ಬಾಲಕರು ಪ್ರಯತ್ನಿಸಿದ್ದಾರೆ. ಈ ವೇಳೆ ಕಬ್ಬಿಣದ ರಾಡ್ನಿಂದ ಹೈಟೆನ್ಶನ್ ವಿದ್ಯುತ್ ತಂತಿ ಸ್ಪರ್ಶಿಸಿದ್ದಾರೆ. ತಕ್ಷಣವೇ ಕರೆಂಟ್ ಶಾಕ್ ಹೊಡೆದಿದೆ. ಮಕ್ಕಳಿಬ್ಬರಿಗೂ ಸುಟ್ಟ ಗಾಯಗಳಾಗಿತ್ತು. ತಕ್ಷಣವೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಪ್ರೀತ ಎನ್ನುವ ಬಾಲಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ನಿಮ್ಮ ಕಾಮೆಂಟ್ ಬರೆಯಿರಿ