10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 2521 ಉದ್ಯೋಗಾವಕಾಶ

ಉದ್ಯೊಗಾಂಕ್ಷಿಗಳಿಗೆ ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ wcr.indianrailways.gov.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ಬಗ್ಗೆ ಮಾಹಿತಿ
ಒಟ್ಟು ಹುದ್ದೆಗಳ ಸಂಖ್ಯೆ- 2521
ಜೆಬಿಪಿ ವಿಭಾಗ- 884 ಹುದ್ದೆಗಳು
ಬಿಪಿಎಲ್‌ ವಿಭಾಗ- 614 ಹುದ್ದೆಗಳು
ಕೋಟಾ ವಿಭಾಗ- 685
ಡಬ್ಲ್ಯುಆರ್‌ಎಸ್‌ ಕೋಟಾ-160 ಹುದ್ದೆಗಳು
ಸಿಆರ್‌ಡಬ್ಲ್ಯುಎಸ್‌ ಬಿಪಿಎಲ್‌- 158 ಹುದ್ದೆಗಳು
ಎಚ್‌ಕ್ಯೂ ಜೆಬಿಪಿ (HQ JBP)- 20 ಹುದ್ದೆಗಳು

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆ ಅಥವಾ ಅದರ ತತ್ಸಮಾನ ಪರೀಕ್ಷೆಯಲ್ಲಿ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಎನ್‌ಸಿವಿಟಿ/ ಎಸ್‌ಸಿವಿಟಿ (NCVT/SCVT) ನೀಡಿದ ಅಧಿಸೂಚಿತ ವಿಷಯದಲ್ಲಿ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ 5 ವರ್ಷ ಹಾಗೂ ಒಬಿಸಿಗಳಿಗೆ 3 ವರ್ಷ ಹಾಗೂ ಅಂಗ ವೈಕಲ್ಯ ಇರುವವರಿಗೆ 10 ವರ್ಷ (ಪರಿಶಿಷ್ಟ ಜಾತಿ/ ಪಂಗಡದವರಿಗೆ 15 ವರ್ಷ ಹಾಗೂ ಒಬಿಸಿಗಳಿಗೆ 13 ವರ್ಷ) ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ: 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳು ಅಥವಾ ಅದರ ಸಮಾನ ಪರೀಕ್ಷೆ ಮತ್ತು ಐಟಿಐ/ಟ್ರೇಡ್ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಡಾಕ್ಯುಮೆಂಟ್ ವೆರಿಫಿಕೇಶನ್ (ಡಿವಿ) ಗೆ ಹಾಜರಾಗಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 17, 2022 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ https://iroams.com/RRCJabalpur/applicationAfterIndex ಲಿಂಕ್  ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಕುರಿತು ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು  ಇಲ್ಲಿ Railway-WCR-Recruitment-2022-Notification-PDF   ಕ್ಲಿಕ್  ಮಾಡಿ ನೋಡಬಹುದಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ "ತಪ್ಪು" ಎಂದು ನಂಬುತ್ತಾರೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement