ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ಆಯೋಜನೆ ; ಮಹಾ ಸಿಎಂ ಶಿಂಧೆ, ಪವಾರ, ಠಾಕ್ರೆಗೆ ಅಹ್ವಾನ

ಬೆಳಗಾವಿ : ಬೆಳಗಾವಿಯಲ್ಲಿ ಡಿಸೆಂಬರ್ 19ರಿಂದ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ಆರಂಭವಾಗಲಿದೆ. ಪ್ರತಿ ವರ್ಷದಂತೆ ಇದಕ್ಕೆ ಪ್ರತಿಯಾಗಿ ಅಧಿವೇಶನ ಸಮಯದಲ್ಲೇ ಎಂಇಎಸ್ ಮಹಾಮೇಳಾವನ್ನು ಡಿಸೆಂಬರ್ 19 ರಂದು ಆಯೋಜಿಸಿದೆ.
ಈ ವರ್ಷ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಎಂಇಎಸ್ ಈ ಬಾರಿ ಮಹಾಮೇಳಾವವನ್ನು ಜೋರಾಗಿ ನಡೆಸಲು ತಯಾರಿ ನಡೆಸುತ್ತಿದೆ. ಡಿಸೆಂಬರ್ 19 ರಂದು ಟಿಳಕವಾಡಿ ವ್ಯಾಕ್ಸಿನ್ ಡಿಪೋದಲ್ಲಿ ನಡೆಯಲಿರುವ ಮಹಾಮೇಳಾವಕ್ಕೆ ಈ ಬಾರಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಕೇಂದ್ರದ ಮಾಜಿ ಸಚಿವ ಶರದ್‌ ಪವಾರ, ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜೇ ದೇಸಾಯಿ, ಶಿವಸೇನೆ ಅಧ್ಯಕ್ಷ ಉದ್ದವ ಠಾಕ್ರೆ ಸೇರಿದಂತೆ ಹಲವು ನಾಯಕರಿಗೆ ಅಹ್ವಾನ ನೀಡಲಾಗಿದೆ. ಜೊತೆಗೆ ವಿವಿಧ ಪಕ್ಷಗಳ ನಾಯಕರಿಗೆ ಆಗಮಿಸುವಂತೆ ಮನವಿ ಮಾಡಲಾಗಿದೆ.

3.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement