ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಾರು ಹತ್ತುವ ಮುನ್ನವೇ ಚಾಲಕನಿಗೆ ಹೃದಯಾಘಾತ, ಸಾವು

ಬೆಂಗಳೂರು: ಶನಿವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಜ್ಯಪಾಲರನ್ನು ವಿಮಾನ ನಿಲ್ದಾಣದಿಂದ ಕರೆದೊಯ್ಯಲು ಆಗಮಿಸಿದ್ದ ಚಾಲಕ ರವಿಕುಮಾರ ಅವರಿಗೆ ರಾಜ್ಯಪಾಲರನ್ನು ಕರೆದೊಯ್ಯುವ ಮೊದಲೇ ಹೃದಯಾಘಾತವಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ವನಿರ್ಧರಿತ ಶೆಡ್ಯೂಲ್‌ನಂತೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಜ್ಯಪಾಲರನ್ನು ಕರೆದೊಯ್ಯುವ ಸಲುವಾಗಿ ರವಿಕುಮಾರ ಬಂದಿದ್ದರು.
ವಿಮಾನದಿಂದ ರಾಜ್ಯಪಾಲರ ಬರುವಿಕೆಗಾಗಿ ರವಿಕುಮಾರ ಎಸ್. ಕಾಳೆ ವಿಮಾನ ನಿಲ್ದಾಣದ ವಿವಿಐಪಿ ಲಾಂಜ್‌ ಬಳಿ ಕಾಯುತ್ತಿದ್ದರು. ರಾಜ್ಯಪಾಲರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾರು ಹತ್ತಲು ತಯಾರಿ ನಡೆದಿತ್ತು. ಆಗ ಕಾರು ಚಾಲಕ ರವಿ ಕುಮಾರ ಕಾಳೆಗೆ ಎದೆ ನೋವು ಕಾಣಿಸಿಕೊಂಡಿದೆ. ವಿಐಪಿ ಲಾಂಜ್‌ನಲ್ಲಿದ್ದ ಕಾರಿನಲ್ಲಿಯೇ ಅವರು ಕುಸಿದು ಬಿದ್ದರು. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಆಸ್ಟರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ,ಮಧ್ಯರಾತ್ರಿ ರವಿಕುಮಾರ ಅವರು ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.
ನಂತರ ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಪಾಲರು ಬಳಿಕ ರಾಜಭವನಕ್ಕೆ ತೆರಳಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

 

 

 

 

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement