ನಾಗಮಂಗಲ ಬಳಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ  ನಾಲ್ವರು ಸ್ಥಳದಲ್ಲಿ ಸಾವಿಗೀಡಾಗಿದ್ದು, ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ಗೇಟ್ ಬಳಿ ನಡೆದ ವರದಿಯಾಗಿದೆ.
ಘಟನೆಯಲ್ಲಿ ಮೂರ್ನಾಲ್ಕು ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ ಬಿಜಿಎಸ್‌ (BGS) ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್ ದಾಟಿ ಡಿಕ್ಕಿ ಹೊಡೆದು ಬೆಂಗಳೂರು ಕಡೆ ಬರುತ್ತಿದ್ದ ಸ್ವಿಫ್ಟ್‌ ಕಾರಿನ ಮೇಲೆ ಬಿದ್ದು ಅಪಘಾತ ಸಂಭವಿಸಿದೆ. ಮೃತರು ಹಾಗೂ ಗಾಯಾಳುಗಳ ವಿವರ ತಿಳಿದು ಬರಬೇಕಿದೆ. ಜಿಟಿ ಜಿಟಿ ಮಳೆಗೆ ವಾಹನ ನಿಯಂತ್ರಣ ತಪ್ಪಿ ಅಪಘಾತವಾಗಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಬಿಂಡಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಂಡಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

3 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement