ರಾಜ್ಯದಲ್ಲಿ ಮುಂದುವರಿದ ಶೀತದ ವಾತಾವರಣ; ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಮಾಂಡೌಸ್​ ಚಂಡಮಾರುತದಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಶೀತ ವಾತಾವರಣ ನಿರ್ಮಾಣವಾಗಿದೆ. ಕಳೆದ ನಾಲ್ಕು ದಿನದಿಂದ ಜಿಟಿ ಜಿಟಿ ಮಳೆಯ ಜತೆಗೆ ಶೀತಗಾಳಿ (Cold Wind) ಬೀಸುತ್ತಿದೆ. ಮೈ ಕೊರೆಯುವ ಚಳಿಗೆ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆ ಜನರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ.
ಚಳಗಾಳಿಯ ಈ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು (ನವಜಾತ ಶಿಶುಗಳು ಸೇರಿದಂತೆ), ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಕೆಳಗಿನ ಸಲಹೆಗಳನ್ನು ಪಾಲಿಸಲು ಆರೋಗ್ಯ ಇಲಾಖೆ ಸೂಚಿಸಿದೆ.
ಬೆಚ್ಚಗಿನ ನೀರು ಕುಡಿಯುವುದು
ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು
ಸ್ವೆಟರ್‌, ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು ಹಾಗೂ ಮನೆಯ ಒಳಗಿರುವಾಗಲೂ ಬೆಚ್ಚಗಿರುವಂತೆ ನೋಡಿಕೊಳ್ಳುವುದು.
ಸ್ನಾನಕ್ಕೆ ಬಿಸಿ ನೀರು / ಬೆಚ್ಚಗಿನ ನೀರನ್ನು ಉಪಯೋಗಿಸುವುದು
ಅನಗತ್ಯವಾಗಿ ಹೊರ ಸಂಚಾರ ತಪ್ಪಿಸುವುದು

ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳುವುದು ಅಥವಾ ಸ್ಕಾರ್ಫ್ ಕಟ್ಟಕೊಳ್ಳಬೇಕು ಹಾಗೂ ಹೊರಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು.
ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳರುವವರಿಂದ ದೂರವಿರಬೇಕು
ಸೀನುವಾಗ ಅಥವಾ ಕೆಮ್ಮುವಾಗ ಮೊಣಕೈ ಒಳಗೆ ಸೀನಬೇಕು ಅಥವಾ ಕೆಮ್ಮಬೇಕು ಹಾಗೂ ಸೀನುವಾಗ, ಕೆಮ್ಮುವಾಗ ಟಿಶ್ಯೂ ಅಥವಾ ಕರವಸ್ತ್ರವನ್ನು ಬಳಸಬೇಕು
ಜ್ವರ‌ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳಿದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯಬೇಕು.
ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು.
ತಣ್ಣಗಿನ ಪಾನೀಯಗಳು , ಐಸ್ ಕ್ರೀಂಗಳನ್ನು ಸೇವಿಸುವುದು ಬೇಡ
ರೆಫ್ರಿಜರೇಟರ್‌ನ ಅಥವಾ ತಣ್ಣಗಿನ ನೀರನ್ನು ಕುಡಿಯವುದು ಬೇಡ
ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದರಿಂದ ದೂರವಿರಿ.
ಹೊರಾಂಗಣ ಪ್ರವಾಸಗಳನ್ನು ಆದಷ್ಟು ಕಡಿಮೆ ಮಾಡಿ.
ಮಸಾಲೆಯುಕ್ತ ಪದಾರ್ಥಗಳು / ಜಂಕ್ ಫುಡ್‌ಗಳನ್ನು ಸೇವಿಸುವುದು ಬೇಡ ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement