ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಮೃತಪಟ್ಟಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ (ಎನ್ ಎಚ್ 766) ಲಾರಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಡಿಕ್ಕಿ ಹೊಡೆದಿದೆ. ಮದ್ದೂರು ವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ರಾತ್ರಿ 9 ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ಮೊದಲೇ ಈ ಘಟನೆ ನಡೆದಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ. ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಾದ ಬಳಿಕ ವಾಹನ ಅಪಘಾತದಲ್ಲಿ ದೊಡ್ಡ ಪ್ರಾಣಿಯೊಂದು ಮೃತಪಡುತ್ತಿರುವುದು ಇದೇ ಮೊದಲಾಗಿದೆ. ಘಟನೆ ಸಂಬಂಧ ಚಾಲಕನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ನಿಮ್ಮ ಕಾಮೆಂಟ್ ಬರೆಯಿರಿ