ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು

ರಾಮನಗರ ಜಿಲ್ಲೆಯ ಮಾಗಡಿ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿಯ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಪೊಲೀಸರು ಈಚೆಗೆ 216 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ‌.
ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನಾಗಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತೊಬ್ಬ ಆರೋಪಿ ಸುರೇಶ ಎಂಬವರು ತಲೆಮರೆಸಿಕೊಂಡಿದ್ದಾರೆ. ವೈಯಕ್ತಿಕ ದ್ವೇಷದಿಂದ ಬಸವಲಿಂಗ ಸ್ವಾಮೀಜಿ ವಿರುದ್ಧ ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಲಾಗಿದೆ.
ಬಸವಲಿಂಗ ಸ್ವಾಮೀಜಿ ಹಾಗೂ ಆರೋಪಿ ನೀಲಾಂಬಿಕೆ ಅವರಿಗೆ ವರ್ಷದ ಹಿಂದೆ ಪರಿಚಯ ಆಗಿದ್ದು, ಕ್ರಮೇಣ ಸಲುಗೆ ಬೆಳೆದಿತ್ತು. ಕಳೆದ ಫೆಬ್ರುವರಿಯಿಂದ ಈ ಇಬ್ಬರು ನಿರಂತರ ಸಂಪರ್ಕದಲ್ಲಿದ್ದರು. ವಿಡಿಯೊ ಚಾಟ್‌ಗಳ ಮೂಲಕ ಖಾಸಗಿ ಕ್ಷಣಗಳನ್ನೂ ಹಂಚಿಕೊಂಡಿದ್ದನ್ನು ವೀಡಿಯೊ ಮಾಡಿಕೊಂಡ ನೀಲಾಂಬಿಕೆ ಅದನ್ನು ಮೃತ್ಯುಂಜಯ ಸ್ವಾಮೀಜಿಗೆ ತಲುಪಿಸಿದ್ದಳು. ಸ್ವಾಮೀಜಿ ಅದನ್ನು ವಕೀಲ ಮಹದೇವಯ್ಯರಿಗೆ ತಲುಪಿಸಿ, ಎಡಿಟ್ ಮಾಡಿಸಿ ಸಿ ಡಿ ಮಾಡಿಸಿಕೊಂಡಿದ್ದರು. ಅಲ್ಲಿಂದ ಬಸವಲಿಂಗ ಸ್ವಾಮೀಜಿಗೆ ಬ್ಲಾಕ್‌ಮೇಲ್ ಮಾಡಲಾಗಿತ್ತು. ಇದಕ್ಕೆ ಹೆದರಿ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement