ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ ಬೆಂಗಳೂರಿಗೆ ಸ್ಥಳಾಂತರ

ಮಂಗಳೂರು: ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನವೆಂಬರ್‌ 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ನನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಶನಿವಾರ (ಡಿಸೆಂಬರ್‌ 17) ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಇನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಲ್ಲಿಂದಲೇ ತನಿಖೆ ನಡೆಸಲಿದೆ. ನವೆಂಬರ್‌ 19ರ ಶನಿವಾರ ಸಂಜೆ ನಾಗುರಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಸಂಭವಿಸಿದ ವೇಳೆ ಅದನ್ನು ಒಯ್ಯುತ್ತಿದ್ದ ಶಾರೀಕ್‌ ಗಂಭೀರ ಗಾಯಗೊಂಡಿದ್ದ. ಆತನನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಕಣ್ಣಿಗೂ ಹಾನಿಯಾಗಿತ್ತು. ಇದೀಗ ಚೇತರಿಕೆ ಕಂಡಿದ್ದು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement