ಪ್ರಧಾನಿಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಪಾಕಿಸ್ತಾನದ ಬಿಲಾವಲ್ ಭುಟ್ಟೋ ಶಿರಚ್ಛೇದ ಮಾಡಿದವರಿಗೆ 2 ಕೋಟಿ ರೂ. ಬಹುಮಾನ ಘೋಷಿಸಿದ ಬಿಜೆಪಿ ನಾಯಕ…!

ಬಾಗ್‌ಪತ್‌ (ಉತ್ತರ ಪ್ರದೇಶ) : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಬಿಜೆಪಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸುತ್ತಿರುವಾಗ, ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಪಾಕಿಸ್ತಾನದ ವಿದೇಶಾಂಗ ಸಚಿವರ ಶಿರಚ್ಛೇದ ಮಾಡುವವರಿಗೆ 2 ಕೋಟಿ ರೂಪಾಯಿಗಳನ್ನು ನೀಡುವುದಾಗಿ ಶನಿವಾರ ಹೇಳಿದ್ದಾರೆ.
ಇಲ್ಲಿನ ಕಲೆಕ್ಟರೇಟ್‌ನಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬಾಗ್‌ಪತ್‌ನ ಜಿಲ್ಲಾ ಪಂಚಾಯತ್ ಸದಸ್ಯ ಮನುಪಾಲ್ ಬನ್ಸಾಲ್ ಈ ಘೋಷಣೆ ಮಾಡಿದ್ದಾರೆ.
“ಮೈನ್ ಐಲಾನ್ ಕರ್ತಾ ಹೂಂ ಕಿ ಜೋ ಉಸ್‌ ಮಂತ್ರಿ ಬಿಲಾವಲ್ ಭುಟ್ಟೋ ಕಾ ಧರ್ ಸೇ ಸಿರ್ ಅಲಗ್ ಕರೇಗಾ, 2 ಕರೋಡ್‌ ಕಾ ಇನಾಮ್ ಮೈ ದೂಂಗಾ (ಸಚಿವ ಬಿಲಾವಲ್ ಭುಟ್ಟೋ ಶಿರಚ್ಛೇದ ಮಾಡುವ ಯಾರಿಗಾದರೂ ನಾನು 2 ಕೋಟಿ ರೂಪಾಯಿ ಬಹುಮಾನ ನೀಡುತ್ತೇನೆ ಎಂದು ಘೋಷಿಸುತ್ತೇನೆ) ಎಂದು ಬನ್ಸಾಲ್ ಹೇಳಿದರು.

ಅವರ ಘೋಷಣೆಯ ನಂತರ ಜನಸಮೂಹದಿಂದ ‘ಮನುಪಾಲ್ ಬನ್ಸಾಲ್ ಜಿಂದಾಬಾದ್’ ಘೋಷಣೆಗಳು ಮೊಳಗಿದವು.
ನಂತರ ಸುದ್ದಿಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಬನ್ಸಾಲ್ ಅವರು ತಮ್ಮ ಹೇಳಿಕೆಗೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ನಾನು ಇಂದು ಆ ಹೇಳಿಕೆಯನ್ನು ನೀಡಿದ್ದೇನೆ, ನಾವು ತುಂಬಾ ಗೌರವಿಸುವ ನಮ್ಮ ಪ್ರಧಾನಿಯ ಬಗ್ಗೆ ಅವರು ಇಂತಹ ಮಾತುಗಳನ್ನು ಹೇಳುತ್ತಿದ್ದರೆ, ಅಂತಹ ವ್ಯಕ್ತಿಯನ್ನು ನಾವು ಸಹಿಸುವುದಿಲ್ಲ. ನಮ್ಮ ಪ್ರಧಾನಿ ಮೇಲೆ ನಮಗೆ ಅಪಾರವಾದ ಗೌರವವಿದೆ ಎಂದು ಬನ್ಸಾಲ್ ತಿಳಿಸಿದರು.
ಪ್ರಧಾನಿ ಮೋದಿಯವರ ಬಗ್ಗೆ ಭುಟ್ಟೋ ಅವರ ಅಸಂಸ್ಕೃತ ಮತ್ತು ಅಸಹ್ಯಕರ ಹೇಳಿಕೆಯನ್ನು ಖಂಡಿಸಲು ಮತ್ತು ಪ್ರತಿಭಟಿಸಲು ಭಾರತ ಒಗ್ಗೂಡಿದೆ” ಎಂದು ಬಿಜೆಪಿ ಶನಿವಾರ ಹೇಳಿದೆ.

ಪ್ರಮುಖ ಸುದ್ದಿ :-   'ಮೋಸ್ಟ್ ವಾಂಟೆಡ್' ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಎನ್‌ಕೌಂಟರ್‌ ವೇಳೆ ಹೊಡೆದುರುಳಿಸಿದ ಭದ್ರತಾ ಪಡೆಗಳು

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement