ಅಮರಾವತಿ: ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಕಾರಣ ಹುಡುಕುತ್ತಿದ್ದ ವ್ಯಕ್ತಿಯೊಬ್ಬ, ಆಕೆಗೆ ಎಚ್ಐವಿ ಸೋಂಕಿತ ರಕ್ತವನ್ನು ಚುಚ್ಚುಮದ್ದಿನ ರೂಪದಲ್ಲಿ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಆಂಧ್ರಪ್ರದೇಶದ ವಿಜಯವಾಡದಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿ ಎಂ.ಚರಣ್ ನಕಲಿ ವೈದ್ಯನ ಸಹಾಯದಿಂದ ಎಚ್ಐವಿ ಸೋಂಕಿತ ರಕ್ತವನ್ನು ತನ್ನ ಪತ್ನಿಗೆ ಇಂಜೆಕ್ಷನ್ ಮೂಲಕ ನೀಡಿದ್ದು, ಪತ್ನಿ ನೀಡಿದ ದೂರಿನ ಮೇರೆಗೆ 40 ವರ್ಷದ ಚರಣನನ್ನು ತಡಪಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ತನಗೆ ವಿಚ್ಛೇದನ ನೀಡಲು “ಸಮಂಜಸವಾದ” ಕಾರಣವನ್ನು ಹುಡುಕುತ್ತಿದ್ದ ಚರಣ್, ನನಗೆ ಎಚ್ಐವಿ ಪೀಡಿತ ರಕ್ತ ಚುಚ್ಚುಮದ್ದನ್ನು ನೀಡುವ ಯೋಜನೆಯ ಪ್ರಕಾರ ತನ್ನನ್ನು ನಕಲಿ ವೈದ್ಯನಿದ್ದಲ್ಲಿಗೆ ಕರೆದೊಯ್ದ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಗರ್ಭಾವಸ್ಥೆಯಲ್ಲಿ ಉತ್ತಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಚುಚ್ಚುಮದ್ದನ್ನು ನೀಡಲಾಗುತ್ತಿದೆ ಎಂದು ನನಗೆ ತಿಳಿಸಲಾಯಿತು ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಆಸ್ಪತ್ರೆಯಲ್ಲಿ ನನ್ನ ಆರೋಗ್ಯ ತಪಾಸಣೆ ನಡೆಸಿದಾಗ ನನಗೆ ಎಚ್ಐವಿ ಪಾಸಿಟಿವ್ ಎಂದು ತಿಳಿದು ಬಂದಿದೆ. ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾನೆ ಮತ್ತು ಗಂಡು ಮಗುವನ್ನು ಹೆರುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ. ದಂಪತಿಗೆ ಒಬ್ಬ ಮಗಳಿದ್ದಾಳೆ.
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸಂತ್ರಸ್ತ ಮಹಿಳೆ ತನ್ನ ಪತಿ ವಿಶಾಖಪಟ್ಟಣಂನ 21 ವರ್ಷದ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿದ್ದಾಳೆ ಮತ್ತು ಚರಣ್ ಕಿರುಕುಳ ನೀಡುತ್ತಿದ್ದಾನೆ ಮತ್ತು ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಹೇಳಿದ್ದಾಳೆ.
ಚರಣ್ ವಿರುದ್ಧ ಕಾನೂನಿನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಂತರ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ