ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ: ಭದ್ರತಾ ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ಘರ್ಷಣೆ, ವಾಹನಗಳು ಧ್ವಂಸ

ಪ್ರಯಾಗರಾಜ್‌: ಸೋಮವಾರ ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆಗಳು ನಡೆದಿದ್ದು, ವಿಶ್ವ ವಿದ್ಯಾಲಯದ ಕ್ಯಾಂಪಸ್‌ನಲ್ಲಿ ಬೆಂಕಿ ಮತ್ತು ವಿಧ್ವಂಸಕ ಕೃತ್ಯಗಳಿಗೆ ಕಾರಣವಾಯಿತು. ಘರ್ಷಣೆಯಲ್ಲಿ ಹಲವಾರು ವಿದ್ಯಾರ್ಥಿಗಳು ಮತ್ತು ಪೊಲೀಸರು ಗಾಯಗೊಂಡಿದ್ದಾರೆ. ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿದ್ದು, ಆದರೆ ಯಾರಿಗೂ ಗಾಯಗಳಾಗಿಲ್ಲ.
ವಿದ್ಯಾರ್ಥಿ ನಾಯಕನನ್ನು ಕ್ಯಾಂಪಸ್‌ಗೆ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿ ತಡೆದ ನಂತರ ಗದ್ದಲ ಪ್ರಾರಂಭವಾಯಿತು ಎಂದು ವರದಿಗಳು ತಿಳಿಸಿವೆ. ಕ್ಯಾಂಪಸ್‌ನ ಒಳಗಿನ ಬ್ಯಾಂಕ್‌ಗೆ ಹೋಗುತ್ತಿರುವುದಾಗಿ ವಿದ್ಯಾರ್ಥಿ ನಾಯಕ ಹೇಳಿದರೂ ಒಳಗೆ ಬಿಡಲಿಲ್ಲ ಎಂದು ಆರೋಪಿಸಲಾಗಿದೆ.
ಇದಾದ ಕೆಲ ಹೊತ್ತಿನಲ್ಲೇ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದರು. ಒಳಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಪೊಲೀಸರನ್ನು ಕರೆಸಲಾಯಿತು, ಕೆಲವೇ ಗಂಟೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿತು.

ಹಿಂಸಾಚಾರ ಪ್ರಾರಂಭವಾದ ನಂತರ ಕ್ಯಾಂಪಸ್‌ಗೆ ಬಂದ ಪೊಲೀಸರ ಮೇಲೆ ವಿದ್ಯಾರ್ಥಿಗಳು ಕಲ್ಲು ಎಸೆಯುತ್ತಿರುವುದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊ ತೋರಿಸುತ್ತದೆ. ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ಅಧಿಕಾರಿಗಳು ಎರಡೂ ಕಡೆಯವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಪ್ರಯಾಗರಾಜ್ ಪೊಲೀಸ್ ಆಯುಕ್ತ ರಮಿತ್ ಶರ್ಮಾ ತಿಳಿಸಿದ್ದಾರೆ.
ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ. ನಾವು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಪರಿಹರಿಸುತ್ತೇವೆ. ಎರಡು ಮೋಟಾರ್ ಸೈಕಲ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಆದರೆ ಇದೀಗ ಅಗ್ನಿಶಾಮಕ ದಳದಿಂದ ಅದನ್ನು ನಿಯಂತ್ರಿಸಲಾಗಿದೆ” ಎಂದು ಪ್ರಯಾಗರಾಜ್ ಪೊಲೀಸ್ ಕಮಿಷನರ್ ರಮಿತ್ ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.

ಪ್ರಮುಖ ಸುದ್ದಿ :-   ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

ಕಳೆದ ಕೆಲವು ತಿಂಗಳಿಂದ ವಿವಿಯಲ್ಲಿ ಶುಲ್ಕ ಏರಿಕೆ ವಿಚಾರವಾಗಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದಾರೆ. ಅಲಹಾಬಾದ್ ವಿಶ್ವವಿದ್ಯಾಲಯದ ಆಡಳಿತವು ಶುಲ್ಕ ಹೆಚ್ಚಳವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ವಿದ್ಯಾರ್ಥಿಗಳು ಮತ್ತು ಜಿಲ್ಲಾಡಳಿತ ಮತ್ತು ವಿಶ್ವವಿದ್ಯಾನಿಲಯದ ಆಡಳಿತದ ನಡುವಿನ ಸರಣಿ ಸಭೆಗಳು ಯಾವುದೇ ನಿರ್ಣಯಕ್ಕೆ ಬಂದಿಲ್ಲ.
ಧರಣಿ ನಿರತ ವಿದ್ಯಾರ್ಥಿಗಳು ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಒಂದು ಸಮೂಹವು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಲು “ಭೂ-ಸಮಾಧಿ” (ಸ್ವಯಂಪ್ರೇರಿತವಾಗಿ ತಮ್ಮನ್ನು ತಾವೇ ಜೀವಂತವಾಗಿ ಹೂಳುವುದು) ತೆಗೆದುಕೊಳ್ಳಲು ಪ್ರಯತ್ನಿಸಿದರು. ವಿದ್ಯಾರ್ಥಿಗಳ ಗುಂಪೊಂದು ರಿಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ವಿಶ್ವವಿದ್ಯಾಲಯವು ಹೇಳಿಕೆಯಲ್ಲಿ ತಿಳಿಸಿದೆ.

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement