ಕಾರವಾರ: ಕೈಗಾದಿಂದ ಬರುತ್ತಿದ್ದಾಗ ಕಾರಿನ ಬಾನೆಟ್ ಒಳಗೆ ಅಚಾನಕ್ ನುಗ್ಗಿ ಆತಂಕ ಸೃಷ್ಟಿಸಿದ್ದ ಕಾಳಿಂಗ ಸರ್ಪವನ್ನು ಅರಣಯ ಇಲಾಖೆ ಸಿಬ್ಬಂದಿ ನಾಲ್ಕು ತಾಸುಗಳ ಕಾಲ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದು ಅದನ್ನು ಕಾಡಿಗೆ ಬಿಟ್ಟ ವಿದ್ಯಮಾನ ವರದಿಯಾಗಿದೆ.
ಕೈಗಾದಿಂದ ಕಾರವಾರದ ಮಲ್ಲಾಪುರಕ್ಕೆ ಜೈ ಸಿಂಗ್ ಎಂಬವರು ಕಾರಿನಲ್ಲಿ ಬರುತ್ತಿದ್ದರು. ಅವರು ಕುಚೇಗಾರ್ ಸಮೀಪ ಬರುತ್ತಿರುವಾಗ ಅಚಾನಕ್ ಆಗಿ 10 ಅಡಿಗಳಷ್ಟು ಉದ್ದದ ಕಾಳಿಂಗ ಸರ್ಪ ಕಾರಿನ ಬಾನೆಟ್ ಒಳಗೆ ನುಗ್ಗಿದೆ. ಗೊತ್ತಾದ ತಕ್ಷಣವೇ ಅವರು ಅರಣ್ಯ ಇಲಾಖೆ ಸಿಬ್ಬಂದಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಮಾಹಿತಿ ಸಿಕ್ಕ ತಕ್ಷಣವೇ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸದಾನಂದ ಗುನಗಿ ಹಾಗೂ ಬಿಲಾವಲ್ ಶೇಖ್ ಅವರು ಕಾರ್ಯಾಚರಣೆಗೆ ಇಳಿದರು. ಕಾರಿನ ಬಾನೆಟ್ ಒಳಗಿಂದ ಕಾಳಿಂಗ ಸರ್ಪಕ್ಕೆ ಪೆಟ್ಟಾಗದ ರೀತಿಯಲ್ಲಿ ಸುರಕ್ಷಿತವಾಗಿ ಸೆರೆ ಹಿಡಿಯುವುದು ಸವಾಲಿನ ಕೆಲಸವಾಗಿತ್ತು. ಸತತ ನಾಲ್ಕು ತಾಸು ಕಾರ್ಯಾಚರಣೆ ನಡೆಸಿಕಾಳಿಂಗ ಸರ್ಪಕ್ಕೆ ಯಾವುದೇ ತೊಂದರೆಯಾಗದಂತೆ ಕಾರಿನ ಬಾನೆಟ್ ಒಳಗಿಂದ ಹೊರ ತೆಗೆದು ಸೆರೆ ಹಿಡಿಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ.
ನಂತರ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.ಕಾಳಿಂಗ ಸರ್ಪ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಿಬ್ಬಂದಿ ರಜತ್ ಗೋವೆಕರ, ಮಧುಕುಮಾರ, ಪರಶುರಾಮ, ರಾಘವೇಂದ್ರ, ನಾಗರಾಜ, ಸಂದೀಪ ಮೊದಲಾದವರಿದ್ದರು.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ