ಯಲ್ಲಾಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ನಿಧನ

ಯಲ್ಲಾಪುರ: ಸಾಮಾಜಿಕ ಕಾರ್ಯಕರ್ತ,ಹಿರಿಯ ಸಹಕಾರಿ ಧುರಿಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ಗುರುವಾರ ನಿಧನರಾದರು. ಅವರಿಗೆ ೯೦ ವರ್ಷ ವಯಸ್ಸಾಗಿತ್ತು.
ಅವರು ವಯೋಸಹಜ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಾಮಾಜಿಕ,ಶೈಕ್ಷಣಿಕ ಹಾಗೂ ಸಹಕಾರಿ ರಂಗದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು ಕುಂದರಗಿಯಲ್ಲಿ ಪೂರ್ಣ ಪ್ರಾಥಮಿಕ ಶಾಲೆ ಆರಂಭಿಸಿದ್ದರು. ೧೯೫೪ ರಲ್ಲಿ ಮಂಚೀಕೇರಿಯಲ್ಲಿ ತಾಲೂಕಿನ ಮೊಟ್ಟಮೊದಲ ಪ್ರೌಢಶಾಲೆ ಆರಂಭಿಸುವಲ್ಲಿಯೂ ಪ್ರಮುಖ ಪಾತ್ರ ನಿರ್ವಹಿಸಿದ್ದರು. ೧೯೭೪ ರಲ್ಲಿ ಭರತನಹಳ್ಳಿಯಲ್ಲಿ ಪ್ರಗತಿ ಶಿಕ್ಷಣ ಅಭಿವೃದ್ಧಿ ಸಂಸ್ಥೆ ಸ್ಥಾಪಿಸಿ, ಬಡ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್, ವಾಚನಾಲಯ, ಸಂಗೀತ ಕಲಿಕೆಗೂ ಅವಕಾಶ ನೀಡಿದ್ದರು. ದೇಶ ವಿದೇಶದ ದಾನಿಗಳನ್ನು ಸಂಪರ್ಕಿಸಿಸಿ ಪ್ರಗತಿ ಸಂಸ್ಥೆಯ ಏಳಿಗೆಗೆ  ಕೊಡುಗೆ ನೀಡಿದ್ದರು.

ಸೋಂದಾ ಸ್ವರ್ಣವಲ್ಲೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾಗಿ ಸಂಸ್ಕೃತ ಕಾಲೇಜು ಆರಂಭಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಶಿರಸಿಯ ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರೂ ಆಗಿ ಕಾರ್ಯ ನಿರ್ವಹಿಸಿದ್ದರು.
ಮಾವಿನಕಟ್ಟೆಯಲ್ಲಿ ೧೯೬೮ ರಲ್ಲಿ ಸೇವಾ ಸಹಕಾರಿ ಸಂಘ, ೧೯೬೬ ರಲ್ಲಿ ಭತ್ತ ಬೆಳೆಗಾರರ
ಸಹಕಾರಿ ಸಂಘ ಮತ್ತು ಅಕ್ಕಿ ಗಿರಣಿ ಆರಂಭಿಸಲು ಶ್ರಮಿಸಿದ್ದರು. ಮಾವಿನಕಟ್ಟೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆಗಳನ್ನು ಕೂಡ ಮಂಜೂರಿ ಮಾಡಿಸಿ ಸಾರ್ವಜನಿಕರಿಗೆ ನೆರವಾಗಿದ್ದರು.
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮೊದಲ ಅಧ್ಯಕ್ಷರಾಗಿದ್ದ ಅವರು ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದರು. ಶಿರಸಿಯ ಟಿ.ಎಸ್.ಎಸ್, ತಾಲೂಕು ಪಿ.ಎಲ್.ಡಿ.ಬ್ಯಾಂಕ್ ಮತ್ತು ಎಪಿಎಂಸಿ ನಿರ್ದೇಶಕರಾಗಿಯೂ
ಕಾರ್ಯನಿರ್ವಹಿಸಿದ್ದರು.ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement