ದಾವಣಗೆರೆ: ಹಾಡುಗಲೇ ಯುವತಿಗೆ ಮನಬಂದಂತೆ ಚುಚ್ಚಿ ಹತ್ಯೆಗೈದ ಪಾಗಲ್ ಪ್ರೇಮಿ

ದಾವಣಗೆರೆ: ತನ್ನ ಪಾಡಿಗೆ ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನು ನಡು ರಸ್ತೆಯಲ್ಲಿ ತಡೆದು ನಿಲ್ಲಿಸಿ, ಮನಬಂದಂತೆ ಚುಚ್ಚಿ-ಚುಚ್ಚಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ನಗರದ ಬಿ.ಜೆ ಬಡಾವಣೆಯ ಚರ್ಚ್ ಮುಂಭಾಗ ಯುವತಿಯನ್ನ ಕೊಂದಿರುವ ಪಾಗಲ್ ಪ್ರೇಮಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನೋಭಾ ನಗರದ ನಿವಾಸಿ ಚಾಂದ್ ಸುಲ್ತಾನಾ ದಾವಣಗೆರೆ ವಿವಿಯಲ್ಲಿ ಎಂಕಾಂ ಪದವಿ ಮುಗಿಸಿ ತೆರಿಗೆ ಸಲಹೆಗಾರರಾದ ಕೆ.ಮಹ್ಮದ್ ಭಾಷಾ ಅವರ ಬಳಿ ಸಿಎ ತರಬೇತಿ ಪಡೆಯುತ್ತಿದ್ದಳು.
ಚಾಂದ್ ಸುಲ್ತಾನಾಳನ್ನ ಮದುವೆಯಾಗಲು ಬಯಸಿದ್ದ. ಆದರೆ ಸುಲ್ತಾನಾ ಆತನ ಪ್ರಸ್ತಾಪವನ್ನು ನಿರಾಕರಿಸಿದ್ದಳು. ಹಾಗೂ ಕುಟುಂಬದ ಸದಸ್ಯರು ಈ ಮದುವೆಗೆ ಒಪ್ಪಿರಲಿಲ್ಲ ಎಂದು ಹೇಳಲಾಗಿದೆ.

ಮತ್ತೊಬ್ಬ ಹುಡುಗನ ಜೊತೆಗೆ ಅವಳ ನಿಶ್ಚಿತಾರ್ಥ ಆಗಿತ್ತು. ಇದರಿಂದ ಸಾದತ್ ಅಲಿಯಾಸ್ ಚಾಂದ್ ಪೀರ್‌ ಕೋಪಗೊಂಡಿದ್ದ. ಮರುದಿನ ಸುಲ್ತಾನ ಕೆಲಸಕ್ಕೆ ಹೋಗುತ್ತಿದ್ದಾಗ ಅವಳ ಜೊತೆ ಮಾತನಾಡಬೇಕು ಎಂದು ನಿಲ್ಲಿಸಿದ್ದಾನೆ, ನಂತರ ನಡು ರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ-ಚುಚ್ಚಿ ಅವಳನ್ನು ಕೊಂದಿದ್ದಾನೆ.
ಕುಟುಂಬದವರಿಗೆ ಕೊಲೆಯ ವಿಚಾರ ತಿಳಿದು, ಕೊಲೆಗಾರನ ಹುಡುಕಾಡುವಷ್ಟರಲ್ಲೇ ಸಾದತ್ ವಿಷ ಸೇವಿಸಿ ಸಿಟಿ ಸೆಂಟ್ರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಾಗಲ್ ಪ್ರೇಮಿ ಚಾಂದ್ ಫೀರ್ ಆಕೆಯನ್ನು ನಡು ರಸ್ತೆಯಲ್ಲೇ ಕೊಂದು ಹಾಕಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಮುಖ ಸುದ್ದಿ :-   ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement