ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಕುಡಿದು ಕುಡಿದು ಟೈಟ್‌ ಆದವರಿಗೆ ಪೊಲೀಸರಿಂದ ಆಂಬುಲೆನ್ಸ್ ವ್ಯವಸ್ಥೆ…!

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮುಳುಗಿ ತೇಲಾಡುವ ಮಂದಿ ಸುರಕ್ಷತೆಗೆ ಬೆಂಗಳೂರು ಪೊಲೀಸ್ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ.
ಯಾರೇ ಕುಡಿದು ಟೈಟಾದರೂ ಅವರಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಡಿಸೆಂಬರ್‌ 31ರ ರಾತ್ರಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ. ಬಾಬಾ ಅವರು ಈ ಮೂಲಕ ಮತ್ತೊಂದು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಕೋರಮಂಗಲ, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಹೆಚ್​ಎಸ್​ಆರ್ ಲೇಔಟ್ ನಲ್ಲಿ ಸಂಪೂರ್ಣ ಭದ್ರತೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗ್ನೇಯ ವಿಭಾಗದಲ್ಲಿ 108 ಪಬ್, ರೆಸ್ಟೋರೆಂಟ್​ಗಳಿವೆ, ಪ್ರತಿಯೊಂದು ಪಬ್, ರೆಸ್ಟೋರೆಂಟ್ ಮುಂದೆಯೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. ಎಣ್ಣೆ ಹೊಡೆದು ಫುಲ್ ಟೈಟಾಗಿ ಪ್ರಜ್ಞೆ ತಪ್ಪಿ ಬೀಳುವವರಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ.

ಕುಡಿದ ಅಮಲಿನಲ್ಲಿ ಕುಣಿದು ಕುಪ್ಪಳಿಸಿ, ಗಾಯ ಮಾಡಿಕೊಂವರಿಗೂ ಈ ವ್ಯವಸ್ಥೆ ಮಾಡಲಾಗುತ್ತಿದೆ. ಆಂಬುಲೆನ್ಸ್ ಮೂಲಕ ಕುಡಿದು ಟೈಟ್‌ ಆದವರನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತದೆ.
ಆಗ್ನೇಯ ವಿಭಾಗದ ಡಿಸಿಪಿಯು ಈ ಕುರಿತು ಎಲ್ಲಾ ಆಸ್ಪತ್ರೆಗಳಿಗೂ ಮಾಹಿತಿ ನೀಡಿದ್ದು, ಆರೋಗ್ಯ ಇಲಾಖೆಗೂ ಪತ್ರ ಬರೆಯಲಾಗಿದೆ. ಪ್ರತಿಯೊಂದು ಪಬ್‌, ರೆಸ್ಟೂರೆಂಟ್‌ಗಳಿಗೆ ಪ್ರವೇಶಿಸುವ ಪ್ರತಿಯೊಬ್ಬರ ಮುಖವೂ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುತ್ತದೆ. ಪೊಲೀಸರಿಗೆ ಪಬ್‌, ರೆಸ್ಟೂರೆಂಟ್‌ಗೆ ಪ್ರವೇಶಿಸುವ ಮುನ್ನ ಮಾಸ್ಕ್‌ ಸರಿಸಿ ಮುಖ ತೋರಿಸಿ ಮುಂದಕ್ಕೆ ಹೋಗಬೇಕು. ಪ್ರತಿಯೊಬ್ಬರ ಫೋಟೊ, ವಿವರವನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ. ಪಬ್‌ನೊಳಗೆಯೂ ತಲಾ ಇಬ್ಬರು ಮಹಿಳಾ ಮತ್ತು ಪುರುಷ ಬಾಡಿಗಾರ್ಡ್‌ಗಳು ಇರಬೇಕು ಎಂದು ಪೋಲೀಸರು ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement