ಕರ್ನಾಟಕದ ಅತ್ಯಂತ ಅಗತ್ಯದ ಕಳಸಾ-ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಅನುಮತಿ : ಪ್ರಹ್ಲಾದ ಜೋಶಿ

posted in: ರಾಜ್ಯ | 0

ಹುಬ್ಬಳ್ಳಿ: ಇಂದು, ಗುರುವಾರ ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ -ಬಂಡೂರಿ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನುವಾದಗಳನ್ನು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ದೆವು. ಈಗ ಈ ಕುಡಿಯುವ ನೀರಿನ ಯೋಜನೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌)ಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿರುವ ಜೋಶಿ, ಬೊಮ್ಮಾಯಿ ಸರ್ಕಾರವೂ ಈ ವಿಚಾರದಲ್ಲಿ ಅತ್ಯಂತ ಪರಿಶ್ರಮಪಟ್ಟಿದೆ. ಹೀಗಾಗಿ ಮುಖ್ಯಮಂತ್ರಿ ಬೊಮ್ಮಾಯಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಬಹುಬೇಡಿಕೆಯ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಕಳುಹಿಸಿದ್ದ ವಿಸ್ತೃತ ಯೋಜನಾ ವರದಿ (ಡಿಪಿಆರ್‌)ಗೆ ಜಲ ಆಯೋಗದ ಅನುಮತಿ ಸಿಕ್ಕಿದ್ದು, ಧಾರವಾಡ, ಬೆಳಗಾವಿ, ಗದಗ ಸೇರಿ ಹಲವು ಜಿಲ್ಲೆಗಳಿಗೆ ಸಿಹಿ ಸುದ್ದಿಯಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಅವರನ್ನ ಭೇಟಿಯಾಗಿದ್ದರು.

ಇಂದಿನ ಪ್ರಮುಖ ಸುದ್ದಿ :-   ಹಿರಿಯ ನಟ ಶರತ್ ಬಾಬು ಆಸ್ಪತ್ರೆಗೆ ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement