‘ವೀರ ಕಂಬಳ’ ಸಿನೆಮಾದಲ್ಲಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ : ಫೋಟೋ ವೈರಲ್‌

posted in: ರಾಜ್ಯ | 0

ಖ್ಯಾತ ನಿರ್ದೇಶಕ ಎಸ್‌.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತುಳುನಾಡಿನ ಸುಪ್ರಸಿದ್ಧ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ ಎಂದು ಫಿಲ್ಮ್‌ಬೀಟ್‌. ಕಾಮ್‌ ವರದಿ ಮಾಡಿದೆ.
‘ವೀರ ಕಂಬಳ’ ಸಿನಿಮಾ ಸಿನೆಮಾ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿ ತೆರೆಗೆ ಬರಲಿದೆ. ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಸಿನಿಮಾ ಮೂಡಿ ಬರುತ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಚಿತ್ರದ ಕಥೆ, ಚಿತ್ರಕಥೆ ಹೆಣೆಯಲಾಗಿದೆ ಎಂದು ವರದಿ ತಿಳಿಸಿದೆ.
ಅರುಣ್ ರೈ ತೋಡಾರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಈ ಸಿನೆಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೊ ವೈರಲ್ ಆಗುತ್ತಿದೆ. ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಕಂಬಳದ ಕೋಣ ಓಡಿಸುವುದರಲ್ಲಿ ಪರಿಣಿತರಾಗಿರುವ ಶ್ರೀನಿವಾಸ್ ಗೌಡ ಹಾಗೂ ರಂಗಭೂಮಿ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳದ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದಿತ್ಯಾ, ರಾಧಿಕಾ ಚೇತನ್, ಭೋಜರಾಜ್, ನವೀನ್ ಪಡೀಲ್ ಕೂಡ ಚಿತ್ರದಲ್ಲಿದ್ದಾರೆ. ತುಳುನಾಡಿನ ಭಾಷೆ, ಸಂಸ್ಕೃತಿ ಸೊಗಡನ್ನು ಈ ಸಿನಿಮಾದಲ್ಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement