ರೈತನ ಮೇಲೆ ಆನೆ ದಾಳಿ: ಗಂಭೀರ ಗಾಯ

ಚಾಮರಾಜನಗರ : ಜಮೀನಿನಲ್ಲಿ ರೈತರೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ತೀವ್ರವಾಗಿ ಗಾಯಗೊಂಡ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಬೆಟ್ಟದಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟದಮಾದಹಳ್ಳಿ ಗ್ರಾಮದ ರೈತ ದೇವರಾಜಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. . ರೈತನ ಚೀರಾಟ ಮತ್ತು ಕೂಗಾಟ ಕೇಳಿ ಆಗಮಿಸಿದ ನೆರೆಹೊರೆ ಹೊಲಗಳ ರೈತರು ದೇವರಾಜ್‌ನನ್ನು ಕೂಡಲೇ ಆಸ್ಪತ್ರೆಗೆ ಕರೆದಯಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ನಂತರ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಒಯ್ಯಲಾಗಿದೆ.
ಆನೆಯು ಬೆಟ್ಟದಮಾದಹಳ್ಳಿ ವ್ಯಾಪ್ತಿಯ ರೈತರ ಜಮೀನಿನ ಬಾಳೆ ಸೇರಿದಂತೆ ಹಲವು ಬೆಳೆಗಳಿಗೆ ಆನೆ ಲಗ್ಗೆಯಿಟ್ಟಿದ್ದು, ಹಲವು ಜಮೀನುಗಳಲ್ಲಿ ಅಳವಡಿಕೆ ಮಾಡಿದ್ದ ತಂತಿ ಬೇಲಿಯನ್ನು ತುಳಿದು ಕಿತ್ತು ಹಾಕಿದೆ ಎನ್ನಲಾಗಿದೆ. ಒಂಟಿ ಸಲಗ ಬಾಳೆ ತೋಟದಲ್ಲಿ ಬೀಡು ಬಿಟ್ಟ ಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement