ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 1976 ಕೋಟಿ ಬಿಡ್ ಆಹ್ವಾನ : ಸಂಸದ ಕಟೀಲುಗೆ ನಿತಿನ್ ಗಡ್ಕರಿ ಪತ್ರ

ಮಂಗಳೂರು: ಪಶ್ಚಿಮ ಕರಾವಳಿ ಮತ್ತು ಬೆಂಗಳೂರು ರಸ್ತೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ ರಸ್ತೆ ಚತುಷ್ಪಥ ರಸ್ತೆಯಾಗುತ್ತಿದ್ದು, ಇದಕ್ಕೆ ಸರ್ಕಾರ ಬಿಡ್‌ ಆಹ್ವಾನಿಸಿದೆ. 24 ತಿಂಗಳ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವ ಷರತ್ತನ್ನೂ ವಿಧಿಸಿದೆ.
ಶಿರಾಡಿ ಘಾಟ್ ರಸ್ತೆ ವಿಚಾರಕ್ಕೆ ಇದೀಗ ಕೇಂದ್ರ ಸರಕಾರ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಹೊರಟಿದ್ದು, ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 1976 ಕೋಟಿ ರೂ. ಮೊತ್ತದ ಬಿಡ್‌ನ್ನು ಆಹ್ವಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನಕುಮಾರ ಕಟೀಲು ಅವರಿಗೆ ಬರೆದ ಪತ್ರದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಪ್ರಸಕ್ತ ಇರುವ 25 ಕಿಮೀ ಅಂತರದ ದ್ವಿಪಥ ರಸ್ತೆಯನ್ನು ಚತುಷ್ಪಥವನ್ನಾಗಿ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಸಂಬಂಧ ಬಿಡ್‌ ಆಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಫೆಬ್ರವರಿ 1 ಬಿಡ್ ಸಲ್ಲಿಸಲು ಕೊನೆಯ ದಿನ. ಇಪಿಸಿ ಮಾದರಿಯಲ್ಲಿ 24 ತಿಂಗಳ ಒಳಗೆ ಕಾಮಗಾರಿ ಮುಗಿಸುವ ಷರತ್ತನ್ನೂ ಪ್ರಾಧಿಕಾರ ಹಾಕಿದೆ ಎಂದು ಹೇಳಿದ್ದಾರೆ.
ಈ ಚತುಷ್ಪಥ ಕಾಮಗಾರಿ ಜೊತೆಗೆ ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡಲಿರುವ ಶಿರಾಡಿ ಘಾಟ್ ಟನಲ್ ಯೋಜನೆಯನ್ನು 15,000 ಕೋಟಿ ವೆಚ್ಚದಲ್ಲಿ 23 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ 2023ರ ಏಪ್ರಿಲ್ ಒಳಗೆ ಡಿಪಿಆರ್ ಅನ್ನು ಅಂತಿಮಗೊಳಿಸಿ ಮತ್ತು ಮೇ ತಿಂಗಳಲ್ಲಿ ಬಿಡ್‌ಗಳನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಸಕಲೇಶಪುರದಿಂದ ಮಾರನಹಳ್ಳಿಯ ಭಾಗದ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಕೂಡಲೇ ದುರಸ್ತಿ ಮಾಡಲು ನಿರ್ಧರಿಸಲಾಗಿದ್ದು, ದುರಸ್ತಿ ಕಾಮಗಾರಿಗೆ 12.20 ಕೋಟಿ ಬಿಡ್‌ನ ಮೌಲ್ಯಮಾಪನ ಮಾಡಲಾಗುತ್ತಿದೆ. ಅಲ್ಲದೇ ಅಸ್ತಿತ್ವದಲ್ಲಿರುವ ರಸ್ತೆ ನಿರ್ವಹಣೆಗೆ ಗುತ್ತಿಗೆದಾರರು ಪ್ಯಾಚ್ ವರ್ಕ್ ದುರಸ್ತಿಗೆ ಮುಂದಾಗಿದ್ದಾರೆ ಎಂದು ಗಡ್ಕರಿ, ನಳಿನ್ ಕುಮಾರ್ ಕಟೀಲ್‌ಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಶಿರಾಡಿ ಸುರಂಗ ಹೆದ್ದಾರಿ ಕಾರ್ಯಸಾಧುವಲ್ಲ
ಕಳೆದ ಹಲವು ವರ್ಷಗಳಿಂದ ಪ್ರಸ್ತಾಪಿತ ಶಿರಾಡಿ ಘಾಟ್‌ ಸುರಂಗ ಮಾರ್ಗ ಹೆದ್ದಾರಿ ಯೋಜನೆ ಕಾರ್ಯ ಸಾಧ್ಯವಲ್ಲ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದ್ದು, ಈ ಯೋಜನೆ ಕೈತಪ್ಪುವ ಸೂಚನೆ ದೊರೆತಿದೆ. ಲೋಕಸಭೆಯಲ್ಲಿ ಸಂಸದ ನಳಿನಕುಮಾರ್‌ ಕಟೀಲು ಅವರ ಪ್ರಶ್ನೆಗೆ ಕೇಂದ್ರ ಹೆದ್ದಾರಿ, ಭೂಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ನೀಡಿದ ಉತ್ತರದಲ್ಲಿ ಈ ವಿಚಾರ ಉಲ್ಲೇಖಿಸಿದ್ದಾರೆ. ಈ ಯೋಜನೆಯು ಅತಿ ಸವಾಲಿನದ್ದಾಗಿದ್ದು, ದೊಡ್ಡ ಮೊತ್ತದ ಬಂಡವಾಳ ಬೇಕಾಗುತ್ತದೆ. ಹಾಗಾಗಿ ಇದು ಕಾರ್ಯಸಾಧುವಲ್ಲ ಎಂದು ಹೇಳಿದ್ದಾರೆ.
ಸುರಂಗ ಹೆದ್ದಾರಿ ಬದಲಿಗೆ ಶಿರಾಡಿ ಘಾಟ್‌ ಹೆದ್ದಾರಿ ಭಾಗದಲ್ಲಿ ಸಂಚಾರ ದಟ್ಟಣೆ ಸುಗಮಗೊಳಿಸಲು ಈಗಿರುವ ದ್ವಿಪಥ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸಲಾಗುತ್ತದೆ, ಇದಕ್ಕಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸಾಧ್ಯತಾ ವರದಿ (ಡಿಪಿಆರ್‌) ತಯಾರಿಕೆ ತಜ್ಞರನ್ನು ನೇಮಿಸಿದ್ದಾರೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement