ದೆಹಲಿಯ ಭಯಾನಕ: ಅಪಘಾತದ ನಂತರ ತಮ್ಮ ವಾಹನವ ಬಿಟ್ಟು ಆಟೋದಲ್ಲಿ ಪರಾರಿಯಾದ ಆರೋಪಿಗಳು | ವೀಕ್ಷಿಸಿ

ನವದೆಹಲಿ: ದೆಹಲಿಯಲ್ಲಿ ಹೊಸ ವರ್ಷದ ಮುಂಜಾನೆ ವಾಹನದ ಅಪಘಾತದ ಭೀಕರ ಘಟನೆಯಲ್ಲಿ ಇಬ್ಬರು ಹೊಸ ಶಂಕಿತರು ರಾಡಾರ್‌ಗೆ ಬಂದಿದ್ದಾರೆ. ಅಪಘಾತದಲ್ಲಿ 20 ವರ್ಷದ ಯುವತಿಯೊಬ್ಬರು ಕಾರಿನ ಕೆಳಗೆ ಸಿಲುಕಿದ ನಂತರ ಕಾರು 13 ಕಿಲೋಮೀಟರ್ ಎಳೆದೊಯ್ದು ಸಾವಿಗೀಡಾಗಿದ್ದಾರೆ. ಅಪಘಾತದ ನಂತರ ಅವರು ತಮ್ಮ ವಾಹನವನ್ನು ಪಾರ್ಕಿಂಗ್ ಸ್ಥಳದಲ್ಲಿ ಬಿಟ್ಟು ಆಟೋದಲ್ಲಿ ಪರಾರಿಯಾಗುವುದನ್ನು ಕಾಣಬಹುದು.
“ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಭಾಗಿಯಾಗಿದ್ದಾರೆ. ನಮ್ಮ ಬಳಿ ವೈಜ್ಞಾನಿಕ ಪುರಾವೆಗಳಿವೆ ಎಂದು ಪೊಲೀಸ್ ಅಧಿಕಾರಿ ಸಾಗರ್‌ಪ್ರೀತ್ ಹೂಡಾ ಹೇಳಿದ್ದಾರೆ.
ನಾವು ಆದಷ್ಟು ಬೇಗ ಚಾರ್ಜ್ ಶೀಟ್ ಸಲ್ಲಿಸಲು ಪ್ರಯತ್ನಿಸುತ್ತಿದ್ದೇವೆ. ದೆಹಲಿ ಪೊಲೀಸರ ಒಟ್ಟು 18 ತಂಡಗಳು ಈ ಪ್ರಕರಣದ ತನಿಖೆ ನಡೆಸುತ್ತಿವೆ. ಇಬ್ಬರು ಹೊಸ ಆರೋಪಿಗಳು ಸಾಕ್ಷ್ಯವನ್ನು ಹಾಳುಮಾಡಲು ಪ್ರಯತ್ನಿಸಿದ್ದಾರೆ ಎಂದು ಹೇಳಿದರು.
ಎಲ್ಲಾ ಐವರು ಆರೋಪಿಗಳನ್ನು ಸೋಮವಾರ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಘಟನೆಯ ಸಮಯದಲ್ಲಿ ಆರೋಪಿಗಳು ಮದ್ಯದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ. ಆರೋಪಿಗಳು ಮದ್ಯದ ಅಮಲಿನಲ್ಲಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ರಕ್ತದ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಸಿಸಿಟಿವಿ ದೃಶ್ಯಾವಳಿಯಲ್ಲಿ ಭೀಕರ ಅಪರಾಧ ಸೆರೆಯಾಗಿದೆ. ಅಪಘಾತದ ನಂತರ ಮಹಿಳೆಯನ್ನು ಸುಮಾರು 12 ಕಿಲೋಮೀಟರ್ ಎಳೆದೊಯ್ಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನ್ನ ಕುಟುಂಬದ ಸಂಪಾದನೆ ಮಾಡುತ್ತಿದ್ದ ಏಕೈಕ ವ್ಯಕ್ತಿಯಾಗಿದ್ದ ಯುವತಿ, ಅನಾರೋಗ್ಯ ಪೀಡಿತ ತಾಯಿ ಮತ್ತು ಆರು ಒಡಹುಟ್ಟಿದವರನ್ನು ಅಗಲಿದ್ದಾರೆ. ಪ್ರಕರಣದ ನಿರ್ವಹಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಾಯಿ ಪೊಲೀಸರು “ಅಪಘಾತದಂತೆ” ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದನ್ನು “ಅಪರೂಪದ ಅಪರಾಧ” ಎಂದು ಕರೆದಿದ್ದು, ಘಟನೆಯ ಹಿಂದಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ, ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಐವರು ಆರೋಪಿಗಳ ವಿರುದ್ಧ ಹೊಸ ಆರೋಪಗಳನ್ನು ಸೇರಿಸಬಹುದು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement