ಬೆಂಗಳೂರು: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕದ ಮಂಗಳೂರಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರು ಯುವಕರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಗುರುವಾರ ಬಂಧಿಸಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಮತ್ತು ಬೆಂಗಳೂರು ಜಿಲ್ಲೆಗಳ ಆರು ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ದಾಖಲಾದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.
ಬಂಧಿತರನ್ನು ರೆಶಾನ್ ತಾಜುದ್ದೀನ್ ಶೇಖ್ ಮತ್ತು ಹುಜೈರ್ ಫರ್ಹಾನ್ ಬೇಗ್ ಎಂದು ಗುರುತಿಸಲಾಗಿದೆ. ರೆಶಾನ್ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಈ ಪ್ರಕರಣದಲ್ಲಿ ಈ ಹಿಂದೆ ಇಬ್ಬರನ್ನು ಬಂಧಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
“ಇಬ್ಬರು ಬಂಧಿತ ಆರೋಪಿಗಳಾದ ರೆಶಾನ್ ತಾಜುದ್ದೀನ್ ಶೇಖ್ ಮತ್ತು ಹುಜೈರ್ ಫರ್ಹಾನ್ ಬೇಗ್, ಇಸ್ಲಾಮಿಕ್ ಸ್ಟೇಟ್ನ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಕ್ರಿಪ್ಟೋ ವ್ಯಾಲೆಟ್ಗಳ ಮೂಲಕ ತಮ್ಮ ಐಸಿಸ್ ಹ್ಯಾಂಡ್ಲರ್ನಿಂದ ಹಣವನ್ನು ಪಡೆದಿದ್ದಾರೆ” ಎಂದು ಸಂಸ್ಥೆ ಆರೋಪಿಸಿದೆ.
ಆರೋಪಿಗಳು ಮತ್ತು ಶಂಕಿತರ ಮನೆಗಳಲ್ಲಿ ನಡೆಸಿದ ಶೋಧದಲ್ಲಿ ಡಿಜಿಟಲ್ ಸಾಧನಗಳು ಮತ್ತು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ