ಬೆಳಗಾವಿ: ಹಿಂದೂ ಸಂಘಟನೆ ಮುಖಂಡನ ಮೇಲೆ ಫೈರಿಂಗ್

ಬೆಳಗಾವಿ: ಹಿಂದೂಪರ ಸಂಘಟನೆ ಮುಖಂಡನ ಮೇಲೆ ಗುಂಡು ಹಾರಿಸಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ.
ತಾಲೂಕಿನ ಹಿಂಡಲಗಾ ಗ್ರಾಮದ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ಫೈರಿಂಗ್ ಆಗಿದ್ದು, ಅದೃಷ್ಟವಶಾತ್ ರವಿ ಮತ್ತು ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.
ಶನಿವಾರ ಸಂಜೆ ವಾಹನದಲ್ಲಿ ಚಲಿಸುತ್ತಿದ್ದ ಅಪರಿಚಿತರಿಂದ, ರವಿ ಅವರ ವಾಹನದ ಮೇಲೆ ಗುಂಡು ಹಾರಿಸಲಾಗಿದೆ. ರವಿ ಕೋಕಿತಕರ್ ಗಡ್ಡಕ್ಕೆ ಬುಲೆಟ್ ತಗುಲಿ ನಂತರ ಚಾಲಕನ ಕೈಗೆ ಗುಂಡು ತಗುಲಿದೆ. ಚಾಲಕನ ಕೈಯಲ್ಲಿ ಬುಲೆಟ್ ಸಿಕ್ಕಿದ್ದು ಸದ್ಯ ಗಾಯಾಳುಗಳನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ‌ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement