ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್: ಮೂವರು ಆರೋಪಿಗಳ ಬಂಧನ

ಬೆಳಗಾವಿ: ಬೆಳಗಾವಿ ಜಿಲ್ಲೆ ಶ್ರೀರಾಮಸೇನೆ ಅಧ್ಯಕ್ಷ ರವಿ ಮೇಲೆ ಫೈರಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 18 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಕ್ಯಾಂಪ್​ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ಅಭಿಜಿತ್ ಭಾತ್ಕಂಡೆ(41) , ರಾಹುಲ್ ಕೊಡಚವಾಡ (32), ಜ್ಯೋತಿಬಾ ಗಂಗಾರಾಮ್​ (25) ಎಂಬವರಾಗಿದ್ದಾರೆ. ಈ ಬಗ್ಗೆ ಇಂದು, ಭಾನುವಾರ (ಜನವರಿ 08) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಫೈರಿಂಗ್ ನಡೆದು 18 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೈಕ್​ನಲ್ಲಿ ಬಂದು ಗುಂಡಿನ ದಾಳಿ ನಡೆಸಿ ಆರೋಪಿಗಳು ಪರಾರಿಯಾಗಿದ್ದರು. ಈಗ ಫೈರಿಂಗ್ ಪ್ರಕರಣದಲ್ಲಿ ಸುಫಾರಿ ನೀಡಿದ ಆರೋಪಿ ಸೇರಿ ಮೂವರ ಬಂಧನವಾಗಿದೆ. ಅಭಿಜಿತ್ ಮತ್ತು ರವಿ ನಡುವೆ ಹಣಕಾಸಿನ ವ್ಯವಹಾರ, ರಿಯಲ್ ಎಸ್ಟೇಟ್ ಉದ್ಯಮ ಮಾಡುತ್ತಿದ್ದರು. 2020ರ ಜ.1ರಂದು ಅಭಿಜಿತ್ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆಯ ಪ್ರಮುಖ ಆರೋಪಿ ರವಿ ಕೋಕಿತಕರ್ ಆಗಿದ್ದಾರೆ. ವೈಯಕ್ತಿಕ ದ್ವೇಷ ಹಿನ್ನೆಲೆ ನಿನ್ನೆ ಈ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಈ ಆರೋಪಿಗಳು ನಿನ್ನೆ(ಜನವರಿ 08) ಸಂಜೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಕಾರಿನಲ್ಲಿ ಹೋಗುವಾಗ ಹಿಂಡಲಗಾ ಬಳಿ ಗುಂಡಿನ ದಾಳಿ ನಡೆಸಿದ್ದರು. ರವಿ ಕೋಕಿತಕರ್ ಕಾರಿನಲ್ಲಿ ಬೆಳಗಾವಿಯಿಂದ ಹಿಂಡಲಗಾ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್​​​​ನಲ್ಲಿ ಕಾರು ಸ್ಲೋ ಆಗಿದೆ. ಈ ವೇಳೆಯೇ ಫೈರಿಂಗ್ ಮಾಡಿದ್ದರು. ಗುಂಡು ರವಿ ಅವರ ಗದ್ದಕ್ಕೆ ತಗುಲಿ ಬಳಿಕ ಚಾಲಕನ ಕೈಗೆ ತಗುಲಿತ್ತು.
ಆರೋಪಿಗಳ ಬಂಧನಕ್ಕೆ 4 ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ನಾಲ್ಕು ಪ್ರತ್ಯೇಕ ತಂಡ ರಚನೆ ಮಾಡಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಒಂದು ತಂಡ ಗೋವಾ, ಮತ್ತೊಂದು ತಂಡ ಮಹಾರಾಷ್ಟ್ರಕ್ಕೆ ತೆರಳಿ ತೀವ್ರ ಶೋಧ ನಡೆಸಿತ್ತು. ಮತ್ತೆರಡು ತಂಡಗಳು ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಿತ್ತು.

 

3.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement