ಕೋಲಾರದಿಂದ ಸ್ಪರ್ಧಿಸುತ್ತೇನೆ : ಸಿದ್ದರಾಮಯ್ಯ ಘೋಷಣೆ

ಕೋಲಾರ: ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸೋಮವಾರ ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಯಾವುದೇ ಕ್ಷೇತ್ರ ಇಲ್ಲ, ಇನ್ನು ಕೂಡಾ ಕ್ಷೇತ್ರಕ್ಕಾಗಿ ಹುಡುಕಾಟ ಮಾಡುತ್ತಿರುವುದಾಗಿ ಹೇಳಿ ವ್ಯಂಗ್ಯ ಮಾಡುತ್ತಿದ್ದಾರೆ. ಆದರೆ ನನಗೆ ವರುಣಾ ಕ್ಷೇತ್ರದಲ್ಲಿ ಬೇಡಿಕೆ ಇದ್ದರೂ ಕೋಲಾರದಲ್ಲಿ ಶಾಸಕ ಶ್ರೀನಿವಾಸ್ ಗೌಡ ಕ್ಷೇತ್ರ ಬಿಟ್ಟುಕೊಡಲು ತಯಾರಿದ್ದಾರೆ. ಹೀಗಾಗಿ ನಾನು ಇಲ್ಲಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಆದರೆ ಪಕ್ಷದ ನಿರ್ಧಾರ ಅಂತಿಮ ಎಂದು ತಿಳಿಸಿದ್ದಾರೆ.
ನೀವು ಯಾವುದೇ ಕಾರಣಕ್ಕೂ ಸಂಶಯ ಪಡಬೇಡಿ. ಸಿದ್ದರಾಮಯ್ಯ ಬರುವುದಿಲ್ಲ, ಜನರ ಕಷ್ಟ ಸುಖ ಕೇಳುವುದಿಲ್ಲ. ಸಿದ್ದರಾಮಯ್ಯ ಹೊರಗಿನವರು ಎಂದು ಅಪಪ್ರಚಾರ ಮಾಡ್ತಾರೆ. ಆದರೆ ಈಗ ಮಾತು ಕೊಡುತ್ತೇನೆ, ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು ಎಂದು ಹೇಳಿದ್ದಾರೆ.
ಕಳೆದ ಬಾರಿ ಜಯಗಳಿಸಿದ್ದ ಬಾದಾಮಿ , ಪುತ್ರ ಡಾ.ಯತೀಂದ್ರ ಜಯಗಳಿಸಿರುವ ವರುಣ ಮತ್ತು ಕೋಲಾರ ಪೈಕಿ ಯಾವ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಇತ್ತು. ಈಗ ಸಿದ್ದರಾಮಯ್ಯ ವರುಣಾವನ್ನು ಪುತ್ರನಿಗೆ ತ್ಯಾಗ ಮಾಡಿ ಮೊದಲ ಬಾರಿಗೆ ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement