ಫೆಬ್ರವರಿ 12 ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ಏರ್ಪೋರ್ಟ್ ಲೋಕಾರ್ಪಣೆ : ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸೋಮವಾರ ತಿಳಿಸಿದ್ದಾರೆ.
ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಅವರು ಮಾತನಾಡಿದರು.
ವಿಮಾನ ನಿಲ್ದಾಣದ ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹೇಳಿದರು.
ಜಂಗಮ ಸಮಾಜ ದೇವರು ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜ ಕೆಲಸ ಮಾಡುತ್ತಿದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ 1 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರವೇ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement