ನಿರ್ಮಾಣ ಹಂತದ ಕಟ್ಟಡದ ನೀರಿನ ಸಂಪಿಗೆ ಬಿದ್ದು ಇಬ್ಬರು ಪುಟಾಣಿಗಳು ಸಾವು

ಬೆಳಗಾವಿ: ಸವದತ್ತಿ ನಗರದ ಗುರ್ಲಹೊಸೂರ ವಾರ್ಡಿನಲ್ಲಿ ಭೀಕರ ದುರಂತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪಿಗೆ ಬಿದ್ದು ಎರಡು ಮಕ್ಕಳು ಮೃತಪಟ್ಟಿದ್ದಾರೆ. ಎರಡು ಮಕ್ಕಳು ನಾಲ್ಕು ವರ್ಷದವರಾಗಿದ್ದಾರೆ.
ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ಸಂಪ್‌ನಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮೃತ ಮಕ್ಕಳನ್ನು ಶ್ಲೋಕ ಶಂಭುಲಿಂಗಪ್ಪ ಗುಡಿ (4) ಮತ್ತು ಚಿದಾನಂದ ಪ್ರಕಾಶ ಸಾಲುಂಕೆ (4) ಎಂದು ಗುರುತಿಸಲಾಗಿದೆ. ಆಟವಾಡುತ್ತ ಗುರ್ಲಹೊಸೂರ ಗ್ರಾಮದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡ ಏರಿದ್ದ ಈ ಮಕ್ಕಳು ಕಾಲು ಜಾರಿ ನೀರು ತುಂಬಿರುವ ಸಂಪ್​ನಲ್ಲಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಸವದತ್ತಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಕ್ಕಳು ಕಾಣದೇ ಇದ್ದಾಗ ಪೋಷಕರು ಹುಡುಕುತ್ತಾ ಬಂದಿದ್ದಾರೆ. ಕೊನೆಗೆ ಸಂಪ್​ ಗಮನಿಸಿದಾಗ ಮಕ್ಕಳು ಶವ ಪತ್ತೆಯಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement