ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ನೋಟಿಸ್ ನೀಡಿದ ಡಿಜಿಸಿಎ

ಮುಂಬೈ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋ ಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ.
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಸಿಎಯು ಗೋ ಫಸ್ಟ್ ವಿಮಾನ ಸಂಸ್ಥೆಯಿಂದ ‘ಬಹು ತಪ್ಪುಗಳು’ ನಡೆದಿವೆ ಎಂದು ಗೋ ಫಸ್ಟ್‌ಗೆ ಶೋಕಾಸ್ ನೋಟಿಸ್ ನೀಡಿದೆ.
ಗೋ ಫಸ್ಟ್ ಇಂದು, ಮಂಗಳವಾರ “ಅಚಾತುರ್ಯದ ಮೇಲ್ವಿಚಾರಣೆಗೆ ಕ್ಷಮೆಯಾಚಿಸಿದೆ ಮತ್ತು ಒಂದು ವರ್ಷದೊಳಗೆ ಭಾರತದಲ್ಲಿ ಎಲ್ಲಿಯಾದರೂ ಪ್ರಯಾಣಿಸಲು ಪೀಡಿತ ಪ್ರಯಾಣಿಕರಿಗೆ ಒಂದು ಉಚಿತ ಟಿಕೆಟ್ ಅನ್ನು ನೀಡಿದೆ. ಘಟನೆಯಲ್ಲಿ ಭಾಗಿಯಾಗಿರುವ ಸಿಬ್ಬಂದಿಯನ್ನು ಸಹ ಡಿ-ರೋಸ್ಟರ್ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸೋಮವಾರ ಬೆಳಗ್ಗೆ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6:30ಕ್ಕೆ ಜಿ8 116 ವಿಮಾನ ದೆಹಲಿಗೆ ಟೇಕಾಫ್ ಆಗುತ್ತಿದ್ದಂತೆ, ಸುಮಾರು 55 ಪ್ರಯಾಣಿಕರು ಅವರನ್ನು ವಿಮಾನಕ್ಕೆ ತಲುಪಿಸಲು ಬಸ್‌ನಲ್ಲಿ ಬಿಟ್ಟು ಹೋಗಿದ್ದರು.

ಗೋ ಫಸ್ಟ್ ಸಂಸ್ಥೆಯ ಜಿ8-116 ವಿಮಾನ ಬೆಂಗಳೂರಿನಿಂದ ದೆಹಲಿಗೆ ಕಾರ್ಯನಿರ್ವಹಿಸುತ್ತಿತ್ತು. ಆದರೆ ನಿನ್ನೆ ಸೋಮವಾರ ರಾತ್ರಿ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ಯಾಸೆಂಜರ್ ಕೋಚ್‌ನಲ್ಲಿದ್ದ 55 ಪ್ರಯಾಣಿಕರನ್ನು ಬಿಟ್ಟು ಹೋಗಿತ್ತು. ‘ಸಂವಹನದ ಕೊರತೆ, ಸಮನ್ವಯ ಮತ್ತು ದೃಢೀಕರಣದ ಕೊರತೆಯಂತಹ ಇಂಥ ಪರಿಸ್ಥಿತಿಗೆ ಕಾರಣವಾಗಿವೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ.
ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಗೋ ಫಸ್ಟ್ ವಿಮಾನ ಸಂಸ್ಥೆ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು ಎಂದು ಗೋ ಫಸ್ಟ್‌ನ ಅಕೌಂಟೆಬಲ್ ಮ್ಯಾನೇಜರ್/ಚೀಫ್ ಆಪರೇಷನ್ ಅಧಿಕಾರಿಗೆ ಡಿಜಿಸಿಎ ಶೋಕಾಸ್ ನೋಟಿಸ್ ನೀಡಿದೆ.
ಈ ಘಟನೆಗೆ ಸಂಬಂಧಿಸಿದಂತೆ ಉತ್ತರಿಸುವಂತೆ ಗೋ ಫಸ್ಟ್ ಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದು ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement