ಸಿಸ್ಟಂ ವೈಫಲ್ಯದ ನಂತರ ಅಮೆರಿಕದ 5,400ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ಭಾರೀ ವಿಳಂಬ

ನವದೆಹಲಿ: ಕಂಪ್ಯೂಟರ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದಾದ ಅಭೂತಪೂರ್ವ ಅಡಚಣೆಯಿಂದ ಬುಧವಾರ ಅಮೆರಿಕದಾದ್ಯಂತ ವಿಮಾನಗಳ ಹಾರಾಟದ ಮೇಲೆ ಪರಿಣಾಮ ಬೀರಿವೆ. ಅಪಾಯಗಳು, ವಿಮಾನ ನಿಲ್ದಾಣದ ಸೌಲಭ್ಯಗಳಲ್ಲಿನ ಬದಲಾವಣೆಗಳು ಮತ್ತು ಇತರ ಅಗತ್ಯ ಮಾಹಿತಿಯ ಬಗ್ಗೆ ವಿಮಾನ ಸಿಬ್ಬಂದಿಗೆ ಮಾಹಿತಿಯನ್ನು ಒದಗಿಸುವ ನೋಟಿಸ್ ಟು ಏರ್ ಮಿಷನ್ಸ್ ಸಿಸ್ಟಮ್ (NOTAM) ನಲ್ಲಿನ ಸಮಸ್ಯೆ ಕಾಣಿಸಿಕೊಂಡ ನಂತರ ಅಮೆರಿಕದ ಎಲ್ಲಾ … Continued

ದೆಹಲಿ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಗೇಟ್‌ನಲ್ಲಿ ಸಾರ್ವಜನಿಕರೆದುರೇ ಮೂತ್ರ ಮಾಡಿದ ಸೌದಿ ಅರೇಬಿಯಾಕ್ಕೆ ಹೊರಟಿದ್ದ ವ್ಯಕ್ತಿ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ರ ನಿರ್ಗಮನ ಪ್ರದೇಶದ ಗೇಟ್‌ನಲ್ಲಿ 39 ವರ್ಷದ ಕುಡುಕ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ನಡೆದ ಘಟನೆಯ ನಂತರ ಬಂಧಿತನಾಗಿದ್ದ ಬಿಹಾರದ ನಿವಾಸಿ ಜೌಹರ್ ಅಲಿ ಖಾನ್ ಅವರನ್ನು ಅದೇ ದಿನ ಜಾಮೀನು ಬಾಂಡ್ ಮೇಲೆ ಬಿಡುಗಡೆ ಮಾಡಲಾಯಿತು ಎಂದು … Continued

ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

ಹುಬ್ಬಳ್ಳಿ : ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು, ಬುಧವಾರ ಇಂಡಿಗೋ ಅಧಿಕಾರಿಗಳೊಂದಿಗೆ ಈ ಸೇವೆ ಆರಂಭಿಸುವ ಕುರಿತು ಚರ್ಚೆ ನಡೆಸಿದ ನಂತರ ಈ ನಿರ್ಣಯ ಕೈಗೊಳ್ಳಲಾಗಿದೆ. ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ … Continued

ಇಂದು (ಜ.12) ಹುಬ್ಬಳ್ಳಿ ನಗರದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ … Continued

ಮಂಗಳೂರು ಸ್ಫೋಟ: ತೀರ್ಥಹಳ್ಳಿಯಲ್ಲಿ ಶಂಕಿತ ಉಗ್ರರ ಮನೆಗಳು-ಆಸ್ತಿಗಳ ಮೇಲೆ ಇ.ಡಿ.ದಾಳಿ

ಶಿವಮೊಗ್ಗ: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಕರ್ನಾಟಕದ ಐದು ಸ್ಥಳಗಳಲ್ಲಿ ಶೋಧ ನಡೆಸಿದೆ. ಇದಲ್ಲದೆ, ಸ್ಫೋಟದ ಪ್ರಮುಖ ಶಂಕಿತ ಆರೋಪಿ ಶಾರಿಕ್‌ನ ಶಿವಮೊಗ್ಗದ ಮನೆಯಲ್ಲಿ ಶೋಧ ನಡೆಸಲಾಗುತ್ತಿದೆ. ಹೆಚ್ಚುವರಿಯಾಗಿ, ಶಾರಿಕ್ ಕುಟುಂಬವನ್ನು ಹುಡುಕಲಾಗುತ್ತಿದೆ. ಫೆಡರಲ್ ತನಿಖಾ ಸಂಸ್ಥೆಯ ಅಕ್ರಮ ಹಣ ವರ್ಗಾವಣೆ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಎಫ್‌ಐಆರ್ ಅನ್ನು … Continued

ಮೂವರು ಹೆಣ್ಣುಮಕ್ಕಳಿಗೆ ವಿಷವುಣಿಸಿ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಬಾಗಲಕೋಟೆ: ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾಯಿಯೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ತಾಯಿ ರೇಖಾ ಬಗಲಿ (28), ಮಕ್ಕಳಾದ ಸನ್ನಿಧಿ (7), ಸಮೃದ್ಧಿ(4), ಶ್ರೀನಿಧಿ(2) ಎಂದು ಗುರುತಿಸಲಾಗಿದೆ. ಈ ಹಿಂದೆಯೂ ತಾಯಿ ರೇಖಾ ಎರಡು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎಂದು … Continued

ಕುಮಟಾ: ವಿನಾಯಕ ರೆಕ್ಸಿನ್ ಹೌಸ್ ವಿಜಯೋತ್ಸವ – ಶಾಪಿಂಗ್‌ ಉತ್ಸವದಲ್ಲಿ ಗೌರೀಶ ಭಂಡಾರಿಗೆ ಕಾರು ಬಹುಮಾನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳೆಯ ಮೀನುಮಾರುಕಟ್ಟೆ ರಸ್ತೆಯ ಜಯನಗರದಲ್ಲಿರುವ ವಿನಾಯಕ ರೆಕ್ಸಿನ್ ಹೌಸ್‌ನಲ್ಲಿ ಕನ್ನಡದ ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ ನ್ಯೂಸ್ ಸಹಭಾಗಿತ್ವದಲ್ಲಿ ನಡೆದ“ವಿಜಯೋತ್ಸವ – ಶಾಪಿಂಗ್ ಉತ್ಸವ” ಫಲಿತಾಂಶ ಪ್ರಕಟವಾಗಿದೆ. ಹತ್ತು ಸಾವಿರ ರೂ.ಗಳ ಬೆಡ್ ಖರೀದಿಸಿದ್ದ ಗೌರೀಶ ಎಂ. ಭಂಡಾರಿ ಮಣಕಿ ಕುಮಟಾ ಅವರಿಗೆ ಅದೃಷ್ಟ ಒಲಿದು … Continued

ಏಕಕಾಲದಲ್ಲಿ ಎರಡು ಕೋರ್ಸ್‌ಗಳು: ʼಕಾರ್ಯವಿಧಾನʼ ರೂಪಿಸಲು ವಿವಿಗಳಿಗೆ ಯುಜಿಸಿ ಸೂಚನೆ

ನವದೆಹಲಿ: ವಿದ್ಯಾರ್ಥಿಗಳು ಏಕಕಾಲದಲ್ಲಿ ಎರಡು ಶೈಕ್ಷಣಿಕ ಕೋರ್ಸ್‌ಗಳನ್ನು ಮುಂದುವರಿಸಲು ಅನುವು ಮಾಡಿಕೊಡಲು “ಸುಲಭಗೊಳಿಸುವ ಕಾರ್ಯವಿಧಾನವನ್ನು ರೂಪಿಸಲು” ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳು (ಎಚ್‌ಇಐ) ವಲಸೆ ಪ್ರಮಾಣ ಪತ್ರ / ಶಾಲೆ ಬಿಡುವ ಪ್ರಮಾಣ ಪತ್ರಗಳಿಗೆ ಒತ್ತಾಯಿಸುತ್ತಿರುವುದರಿಂದ ವಿದ್ಯಾರ್ಥಿಗಳು ತೊಂದರೆ ಎದುರಿಸುತ್ತಿರುವುದು ತನ್ನ ಗಮನಕ್ಕೆ ಬಂದಿದೆ ಎಂದು ಆಯೋಗ ತಿಳಿಸಿದೆ. … Continued

ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು, ವೈದ್ಯರು ಸೇರಿ 10 ಮಂದಿ ಬಂಧನ

ಮಂಗಳೂರು: ನಗರದಲ್ಲಿ ಗಾಂಜಾ ದಂಧೆ ಆರೋಪದ ಮೇರೆಗೆ 9 ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿದಂತೆ ಹತ್ತು ಮಂದಿಯನ್ನು ಬುಧವಾರ (ಜನವರಿ 11) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ. ಬಂಧಿತ ಒಂಬತ್ತು ಮಂದಿಯಲ್ಲಿ … Continued

ಬೆಳಗಾವಿಯಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಗೆ ಚಾಲನೆ: ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಬಸ್ ಯಾತ್ರೆ ‘ಪ್ರಜಾಧ್ವನಿ’ಗೆ ಇಂದು ಬುಧವಾರ ಬೆಳಗಾವಿಯಿಂದ ಚಾಲನೆ ನೀಡಿದ್ದು, ರಾಜ್ಯದ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವ ಮತ್ತು 2023 ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಅಭಿಯಾನದ ಭಾಗವಾಗಿ, ಹಿರಿಯ ಕಾಂಗ್ರೆಸ್ ನಾಯಕರು ಬಸ್‌ನಲ್ಲಿ ಪ್ರಯಾಣಿಸಲಿದ್ದಾರೆ … Continued