ಯಲ್ಲಾಪುರ: ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಹುಬ್ಬಳ್ಳಿ ಕಡೆಯಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರು ಕಡೆ ಹೊರಟಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಸುದ್ದಿ ತಿಳಿದಿ ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕದವರು ಧಾವಿಸಿ ಬಂದರೂ ದಹಿಸುವ ಬೆಂಕಿಯನ್ನು ತಕ್ಷಣವೇ ನಂದಿಸಲು ಸಾಧ್ಯವಾಗಲಿಲ್ಲ. ಅಷ್ಟೊತ್ತಿಗಾಗಲೇ ಬಹುತೇಕ ಸುಟ್ಟು ಹೋಗಿತ್ತು. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಸಿಮೆಂಟ್ ಚೀಲಗಳಿಗೂ ಹಾನಿಯಾಗಿದೆ.ಲಕ್ಷಾಂತರ ನಷ್ಟ ಉಂಟಾಗಿದೆ. lನೋಡು ನೋಡುತ್ತಿದ್ದಂತೆ ಬೆಂಕಿ, ಲಾರಿ ತುಂಬ ವ್ಯಾಪಿಸಿ, ಸಟ್ಟು ಕರಕಲಾಗಿದೆ. ಚಾಲಕ ಮತ್ತು ನಿರ್ವಾಹಕ ಈ ಅನಾಹುತದಿಂದ ಪಾರಾಗಿದ್ದಾರೆ. ಬೆಂಕಿ ಹೇಗೆ ತಗುಲಿತು, ಹೊತ್ತಿಕೊಂಡಿತು ಎಂಬ ಬಗ್ಗೆ ನಿಖರ ಮಾಹಿತಿಯಿಲ್ಲ. ಕೆಲವರ ಪ್ರಕಾರ ಘಟ್ಟದ ಪ್ರದೇಶದಲ್ಲಿ ಬ್ರೇಕ್ ಲೈನರ್ ಬಿಸಿಯಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಗಳಿವೆ.ಆದರೆ ಯಾವುದಕ್ಕೂ ನಿಖರತೆ ಇಲ್ಲ. ಹೀಗಾಗಿ ಈ ಬಗ್ಗೆ ಕೂಲಂಕಷವಾಗಿ ತನಿಖೆ ನಂತರವೇ ಏನಾಗಿದೆ ಎಂಬ ಮಾಹಿತಿ ಸಿಗಬೇಕಷ್ಟೆ.
ನಿಮ್ಮ ಕಾಮೆಂಟ್ ಬರೆಯಿರಿ