ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ವೃದ್ಧನ 1 ಕಿ.ಮೀ ಎಳೆದೊಯ್ದ ಸವಾರ ; ದೃಶ್ಯಾವಳಿ ವೀಡಿಯೊದಲ್ಲಿ ಸೆರೆ

ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ವಯಸ್ಸಾದವರೊಬ್ಬರನ್ನು ಬೈಕ್ ಸವಾರನೊಬ್ಬ ಸುಮಾರು 1 ಕಿ.ಮೀ. ದೂರದ ವರೆಗೆ ಎಳೆದುಕೊಂಡ ಹೋದ ಭಯಾನಕ ಘಟನೆ ನಗರದ ಮಾಗಡಿ ರಸ್ತೆಯಲ್ಲಿ ನಡೆದಿದೆ.
ಮಂಗಳವಾರ ಮಧ್ಯಾಹ್ನ ಬೈಕ್ ಸವಾರ ಎಸ್‌ಯುವಿಗೆ ಡಿಕ್ಕಿ ಹೊಡೆದಿದ್ದು, ಈ ಬಗ್ಗೆ ವಿಚಾರಿಸಿದ್ದಕ್ಕಾಗಿ ದ್ವಿಚಕ್ರ ವಾಹನ ಸವಾರ ಎಸ್‌ಯುವಿ ಚಾಲಕನನ್ನು ಮಾಗಡಿ ರಸ್ತೆಯ ಟೋಲ್‌ಗೇಟ್‌ನಿಂದ ಹೊಸಹಳ್ಳಿ ಮೆಟ್ರೊ ನಿಲ್ದಾಣದವರೆಗೆ ಸುಮಾರು ಒಂದು ಕಿ.ಮೀ ದೂರ ಎಳೆದುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ವೃದ್ಧನನ್ನು ಬೈಕ್ ಸವಾರನೊಬ್ಬ ತನ್ನ ಸ್ಕೂಟರ್‌ನಲ್ಲಿ ಎಳೆದುಕೊಂಡು ಹೋಗುತ್ತಿರುವುದು ಕಂಡುಬರುತ್ತದೆ. ಆತನನ್ನು ಸುಮಾರು ಒಂದು ಕಿಲೋಮೀಟರ್ ಎಳೆದೊಯ್ದ ನಂತರ, ಬೈಕ್ ಸವಾರನನ್ನು ಹಿಂಬಾಲಿಸಿದ ಇನ್ನೊಬ್ಬ ಬೈಕ್ ಸವಾರ ಮತ್ತು ರಿಕ್ಷಾ ಚಾಲಕ ಮುಂದೆ ಹೋಗದಂತೆ ತಡೆದಿದ್ದಾರೆ.

ಗಾಯಗೊಂಡ ವೃದ್ಧ ಪ್ರಸ್ತುತ ನಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಆರೋಪಿ ಚಾಲಕನನ್ನು ಪಿಎಸ್ ಗೋವಿಂದರಾಜ್ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಗಾಯಗೊಂಡ ಚಾಲಕನನ್ನು    ಮುತ್ತಪ್ಪ ಶಿವಯೋಗಿ ಕಂಠಪ್ಪ (71) (71),ಎಂದು ಗುರುತಿಸಲಾಗಿದೆ. “ನಾನು ನನ್ನ ಎಸ್‌ಯುವಿ (ಮಹೀಂದ್ರ ಬೊಲೆರೋ) ಸವಾರಿ ಮಾಡುತ್ತಿದ್ದೆ, ಆತ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ನನ್ನ ವಾಹನವನ್ನು ಹಿಂದಿನಿಂದ ಡಿಕ್ಕಿ ಹೊಡೆದ.. ನಾನು ಾತನನ್ನು ಪ್ರಶ್ನಿಸಿದಾಗ ಅವನು ನಿಲ್ಲಿಸದೆ ಪರಾರಿಯಾಗಲು ಪ್ರಯತ್ನಿಸಿದ. ಆಗ ಕೆಲವು ವಾಹನ ಚಾಲಕರು ಅವನನ್ನು ತಡೆಯಲು ಪ್ರಯತ್ನಿಸಿದರು, ಆದರೆ ಅವರು ಹೊಸಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಸುಮಾರು ಒಂದು ಕಿಲೋಮೀಟರ್ ಸವಾರಿ ಮಾಡಿದ ಎಂದು ಅವರು ಹೇಳಿದರು.

ಸಂತ್ರಸ್ತ  ಚಾಲಕ ಪ್ರಸ್ತುತ ನಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಎಸ್ ಗೋವಿಂದರಾಜ್ ನಗರದಲ್ಲಿ ದ್ವಿಚಕ್ರ ವಾಹನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪಶ್ಚಿಮ ಬೆಂಗಳೂರು ಡಿಸಿಪಿ ತಿಳಿಸಿದ್ದಾರೆ.
ಬೈಕ್ ಸವಾರನನ್ನು ವೈದ್ಯಕೀಯ ಮಾರಾಟಗಾರ ಸಾಹಿಲ್ ಎಂದು ಗುರುತಿಸಲಾಗಿದ್ದು, ಸದ್ಯ ಪೊಲೀಸರ ವಶದಲ್ಲಿದ್ದಾರೆ. ಗೋವಿಂದರಾಜ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೆಹಲಿಯಲ್ಲಿ ಸ್ಕೂಟಿಯಲ್ಲಿ ಹೋಗುತ್ತಿದ್ದ 20 ವರ್ಷದ ಅಂಜಲಿ ಎಂಬ ಯುವತಿಗೆ ಕಾರು ಡಿಕ್ಕಿ ಹೊಡೆದು 12 ಕಿಮೀ ಎಳೆದೊಯ್ದ ವಾರಗಳ ನಂತರ ಇದು ಬಂದಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement