ದಾರುಣ ಘಟನೆ: ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣು

posted in: ರಾಜ್ಯ | 0

ತುಮಕೂರು: ಜಿಲ್ಲೆಯಲ್ಲಿ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, 9 ದಿನಗಳ ನಂತರ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಶವ ಕೊಳೆತು ದುರ್ವಾಸನೆ ಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕನಾಯಕನಹಳ್ಳಿ ತಾಲೂಕು, ಹುಳಿಯಾರು ಹೋಬಳಿಯ ಬರಕನಹಾಲ್ ತಾಂಡ್ಯದ ರಂಜಿತಾ (24), ಚಂದನಾ (21 ) ಹಾಗೂ ಬಿಂದು (18) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರಾಗಿದ್ದು, ಗುರುವಾರ ಪ್ರಕರಣ ಬೆಳಕಿಗೆ ಬಂದಿದೆ.
ಚಿಕ್ಕ ವಯಸ್ಸಿನಲ್ಲಿಯೇ ತಂದೆ-ತಾಯಿ ಕಳೆದುಕೊಂಡು ಅಜ್ಜಿಯ ಆಶ್ರಯದಲ್ಲಿದ್ದ ಮೂವರು ಯುವತಿಯರು ಅಜ್ಜಿಯೊಂದಿಗೆ ಬೆಳೆದಿದ್ದರು. ಕೆಲ ದಿನಗಳ ಹಿಂದೆ ಅಜ್ಜಿಯೂ ಮೃತಪಟ್ಟ ನಂತರ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.
ಬಾಲದೇವರ ಹಟ್ಟಿಯಿಂದ ಬರಕನಾಲ್ ತಾಂಡ್ಯಕ್ಕೆ ಹೋಗುವ ದಾರಿಯ ರಸ್ತೆ ಬದಿಯಲ್ಲಿರುವ ಒಂಟಿ ಮನೆಯಲ್ಲಿ ಒಂಭತ್ತು ದಿನದ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂದು ಊಹಿಸಲಾಗಿದೆ. ಮೃತದೇಹಗಳು ಕೊಳೆತು ವಾಸನೆ ಬಂದ ನಂತರ ಸ್ಥಳೀಯರು ಅನುಮಾನದ ಮೇಲೆ ಮನೆಯ ಹೆಂಚು ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಇರುವುದನ್ನು ಕಂಡು ಪೊಲೀಸರಿಗೆ ತಿಳಿಸಿದ್ದಾರೆ. ಈ ಘಟನೆ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ: ಪ್ರಜಾಧ್ವನಿ ಯಾತ್ರೆ ವೇಳೆ ಬಸ್‌ ಮೇಲಿಂದ ಹಣ ಎಸೆದ ಡಿ.ಕೆ. ಶಿವಕುಮಾರ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement