ಮೈಸೂರು: ಚಿರತೆ ದಾಳಿಗೆ ಮೂರನೇ ಸಾವು ; ಸೌದೆ ತರಲು ಮನೆಯಿಂದ ಹೊರ ಹೋಗಿದ್ದ ವೃದ್ಧೆ ಮೇಲೆ ಎರಗಿದ ಚಿರತೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ. ಟಿ.ನರಸೀಪುರ ತಾಲೂಕಿನಲ್ಲಿ ಈವರೆಗೆ ಚಿರತೆ ದಾಳಿಯಿಂದ ಮೂವರು ಮೃತಪಟ್ಟಿದ್ದಾರೆ.
ಕನ್ನನಾಯಕನಹಳ್ಳಿ ನಿವಾಸಿ ಸಿದ್ದಮ್ಮ (60) ಚಿರತೆ ದಾಳಿಯಿಂದ ಮೃತಪಟ್ಟ ಮಹಿಳೆಯಾಗಿದ್ದು, ಮನೆಯ ಹೊರಗಿದ್ದ ಸೌದೆ ಎತ್ತಿಕೊಳ್ಳಲು ಹೋಗಿದ್ದ ವೇಳೆ ಸಿದ್ದಮ್ಮ ಅವರ ಮೇಲೆ ಚಿರತೆ ದಾಳಿ ನಡೆಸಿ ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಗ್ರಾಮಸ್ಥರು ಬೊಬ್ಬೆ ಹೊಡೆದಿದ್ದು, ಆಗ ಚಿರತೆ ಸಿದ್ದಮ್ಮ ಅವರನ್ನು ಬಿಟ್ಟು ಓಡಿ ಹೋಗಿದೆ. ಜನ ಬರುವಷ್ಟರಲ್ಲಿ ಸಿದ್ದಮ್ಮ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.
ನವೆಂಬರ್ ತಿಂಗಳಲ್ಲಿ ಟಿ.ನರಸಿಪುರ ತಾಲೂಕಿನಲ್ಲೇ ಚಿರತೆ ಓರ್ವ ಯುವಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ನಂತರ ಮೇಘನಾ ಎಂಬ ಯುವತಿ ಚಿರತೆ ದಾಳಿಯಿಂದ ಮೃತಪಟ್ಟಿದ್ದರು. ಈಗ ಸೌದೆ ತರಲು ಮನೆಯಿಂದ ಹೊರ ಬಂದಿದ್ದ ಸಿದ್ದಮ್ಮ ಎಂಬ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement