ಕುಸ್ತಿ ಫೆಡರೇಶನ್ ಹೆಚ್ಚುವರಿ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯ

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥರ ವಿರುದ್ಧ ಭಾರತದ ಖ್ಯಾತ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ ನಂತರ, ಕೇಂದ್ರ ಕ್ರೀಡಾ ಸಚಿವಾಲಯ ಶನಿವಾರ ಡಬ್ಲ್ಯುಎಫ್‌ಐನ ಹೆಚ್ಚುವರಿ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ಅಮಾನತುಗೊಳಿಸಿದೆ. ಅಮಾನತುಗೊಂಡ ನಂತರ ವಿನೋದ್ ತೋಮರ್ ಅವರು ಅಂತಹ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಕ್ರೀಡಾ ಸಚಿವಾಲಯ … Continued

ಭಾರತದಲ್ಲಿ ತಯಾರಾದ ವಿಶ್ವದ ಮೊದಲನೇ ಕೋವಿಡ್ ಮೂಗಿನ ಲಸಿಕೆ ಗಣರಾಜ್ಯೋತ್ಸವದಂದು ಬಿಡುಗಡೆ

ನವದೆಹಲಿ: ಭಾರತೀಯ ಲಸಿಕೆ ತಯಾರಕರಾದ ಭಾರತ್ ಬಯೋಟೆಕ್ ಭಾರತದ ಗಣರಾಜ್ಯ ದಿನವಾದ ಜನವರಿ 26 ರಂದು ಮೊದಲ ಇಂಟ್ರಾನಾಸಲ್ ಕೋವಿಡ್‌-19 ಲಸಿಕೆ iNCOVACC ಅನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟಿಸಿದೆ. ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲಾ ಅವರು ಶನಿವಾರ ನವದೆಹಲಿಯಲ್ಲಿ ಈ ಘೋಷಣೆ ಮಾಡಿದರು. ಭೋಪಾಲ್‌ನಲ್ಲಿ ನಡೆದ ಇಂಡಿಯಾ ಇಂಟರ್‌ನ್ಯಾಶನಲ್ … Continued

ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸರಣಿ ಹಂಚಿಕೊಳ್ಳುವ ಟ್ವಿಟರ್, ಯೂಟ್ಯೂಬ್ ಲಿಂಕ್‌ಗಳನ್ನು ನಿರ್ಬಂಧಿಸಿದ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಬಂಧಿಸಿದ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಬಿಡುಗಡೆ ಮಾಡಿದ ಗುಜತಿನ ಗೋಧ್ರೋತ್ತರ ವಿದ್ಯಮಾನಗಳ ಡಾಕ್ಯುಮೆಂಟರಿ ಸರಣಿಯನ್ನು ಕೇಂದ್ರವು ನಿರ್ಬಂಧಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಬಿಬಿಸಿಯ ಎರಡು ಭಾಗಗಳ ಸರಣಿಗೆ ‘ನಿರ್ದಿಷ್ಟ ಅಪಪ್ರಚಾರದ ನಿರೂಪಣೆಯನ್ನು ತಳ್ಳಲು ವಿನ್ಯಾಸಗೊಳಿಸಲಾದ ಪ್ರಚಾರದ ತುಣುಕು’ ಎಂದು ಪರಿಗಣಿಸಿದ ಒಂದು … Continued

ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ: ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ ಪಿಎಸ್‌ಐ ಹಗರಣದ ಆರೋಪಿ

ಕಲಬುರ್ಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಕಳೆದ ಮಧ್ಯರಾತ್ರಿ ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ವೀಡಿಯೊದಲ್ಲಿ ಜನ ಬಯಸಿದರೆ, ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಜನ ಬಯಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ. ನಾನು ಓಡಿ … Continued

ವೃದ್ಧ ಶಾಲಾ ಶಿಕ್ಷಕರಿಗೆ ಥಳಿಸಿದ ಇಬ್ಬರು ಮಹಿಳಾ ಪೊಲೀಸ್‌ ಸಿಬ್ಬಂದಿ ; ಅಮಾನುಷ ದೃಶ್ಯ ಕ್ಯಾಮರಾದಲ್ಲಿ ಸೆರೆ

ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ವೃದ್ಧರೊಬ್ಬರನ್ನು ಅಮಾನುಷವಾಗಿ ಥಳಿಸುತ್ತಿರುವ ವೀಡಿಯೊ ಹೊರಬಿದ್ದಿದೆ. ಸೈಕಲ್‌ ಮೇಲೆ ಹೋಗುತ್ತಿದ್ದಾಗ ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದ ವೃದ್ಧರೊಬ್ಬರು ತಕ್ಷಣ ಸೈಕಲ್‌ ಅನ್ನು ಎತ್ತಲಿಲ್ಲ ಎಂದು ಇಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳು ಲಾಠಿಯಿಂದ ಹೊಡೆದಿದ್ದಾರೆ. ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ನಡೆದ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ … Continued

ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

ವಿಜಯಪುರ: ಸಿಂದಗಿಯಲ್ಲಿ ಆಯೋಜನೆಗೊಂಡ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಜ್ಞಾನ ಯೋಗಾಶ್ರಮಕ್ಕೆ ಶನಿವಾರ ಭೇಟಿ ನೀಡಿದರು. ನಡೆದಾಡುವ ದೇವರು ಪರಮಪೂಜ್ಯ ಲಿಂ.ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಅವರು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಗದ್ದುಗೆಗೆ ನಮಿಸಿದರು. ಸಿದ್ದೇಶ್ವರ ಶ್ರೀಗಳು ಕೊನೆಯ ದಿನಗಳನ್ನು ಕಳೆದ ಕೋಣೆಗೆ … Continued

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ; ಕೇಂದ್ರ ಸರ್ಕಾರದ ತನಿಖೆಯ ಭರವಸೆ ನಂತರ ಧರಣಿ ಕೈಬಿಟ್ಟ ಕುಸ್ತಿಪಟುಗಳು

ನವದೆಹಲಿ: ಕೇಂದ್ರ ಸರ್ಕಾರದ ತನಿಖೆ ಭರವಸೆ ಹಿನ್ನೆಲೆಯಲ್ಲಿ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ನಡೆಸುತ್ತಿದ್ದ ಧರಣಿಯನ್ನು ಶನಿವಾರ ಅಂತ್ಯಗೊಳಿಸಿದ್ದಾರೆ. ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತನಿಖೆ ನಡೆಯುವವರಿಗೆ ತಮ್ಮ ಸ್ಥಾನದಿಂದ ಕೆಳಗಿಳಿಯುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು … Continued

ಆಂಧ್ರಪ್ರದೇಶ: ಪೋಲಿಸ್ ಕಾನ್ಸ್‌ಟೇಬಲ್ ಹುದ್ದೆಗೆ ಪಿಎಚ್‌ಡಿ, ಎಂಟೆಕ್, ಎಲ್‌ಎಲ್‌ಬಿ, ಎಂಎಸ್‌ಸಿ ಆದವರಿಂದಲೂ ಅರ್ಜಿ…!

ವಿಜಯವಾಡ: ಆಂಧ್ರಪ್ರದೇಶದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ 10 ಪಿಎಚ್‌ಡಿ ಮತ್ತು 930 ಎಂಟೆಕ್ ಪದವೀಧರರು, 94 ವಕೀಲರು ಮತ್ತು 13,961 ಸ್ನಾತಕೋತ್ತರ ಪದವೀಧರರು ಇದ್ದಾರೆ…! ರಾಜ್ಯ ಮಟ್ಟದ ಪೊಲೀಸ್ ನೇಮಕಾತಿ ಮಂಡಳಿಯ ಅಧಿಕೃತ ಟಿಪ್ಪಣಿಯ ಪ್ರಕಾರ, ಕಾನ್ಸ್‌ಟೇಬಲ್ ಹುದ್ದೆಗೆ ಅರ್ಹತೆಗೆ ಇಂಟರ್‌ಮೀಡಿಯಟ್‌ ಪಾಸ್‌ ಆದರೆ ಸಾಕು. ಭಾನುವಾರ ಲಿಖಿತ ಪರೀಕ್ಷೆ ನಡೆಯಲಿದೆ. ಅಲ್ಲದೆ, … Continued

ಜಮ್ಮುವಿನ ನರ್ವಾಲ್‌ನಲ್ಲಿ 20 ನಿಮಿಷಗಳ ಅಂತರದಲ್ಲಿ ಅವಳಿ ಸ್ಫೋಟ : 7 ಮಂದಿಗೆ ಗಾಯ

ನರ್ವಾಲ್ : ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸುಮಾರು 20 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಸಾರಿಗೆ ನಗರದ ವಾರ್ಡ್ ಸಂಖ್ಯೆ 7ರಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಮೊದಲ ಸ್ಫೋಟ ಸಂಭವಿಸಿದೆ. 15ರಿಂದ 20 ನಿಮಿಷಗಳ ನಂತರ ಇನ್ನೊಂದು ಸ್ಫೋಟ ಅದೇ ಪ್ರದೇಶದಲ್ಲಿ ಸಂಭವಿಸಿದೆ. … Continued

ದೊಡ್ಡ ಟೆಕ್‌ ಕಂಟೆಂಟ್ ಅಗ್ರಿಗೇಟರ್‌ಗಳು ಸುದ್ದಿ ವಿಷಯಗಳಿಗಾಗಿ ಅದರ ಪ್ರಕಾಶಕರಿಗೆ ಪಾವತಿ ಮಾಡಬೇಕು; ಕೇಂದ್ರ ಸರ್ಕಾರ

ನವದೆಹಲಿ: ದೊಡ್ಡ ಟೆಕ್‌ ಕಂಟೆಂಟ್ ಅಗ್ರಿಗೇಟರ್‌ಗಳು ಸುದ್ದಿ ಪ್ರಕಾಶಕರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ “ಆದಾಯಗಳ ನ್ಯಾಯಯುತ ಪಾಲು” ನೀಡಬೇಕು ಮತ್ತು ಈ ಡೈನಾಮಿಕ್‌ನಲ್ಲಿ “ಅಸಮಾನ ಅಸಮತೋಲನ”ವನ್ನು ಪರಿಹರಿಸುವ ಅವಶ್ಯಕತೆಯಿದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (ಡಿಎನ್‌ಪಿಎ) ಆಯೋಜಿಸಿದ್ದ ಒಂದು ದಿನದ ಸಮಾವೇಶದ ಉದ್ಘಾಟನಾ ಅಧಿವೇಶನದಲ್ಲಿ ಓದಿದ ಸಂದೇಶದಲ್ಲಿ, ಮಾಹಿತಿ ಮತ್ತು ಪ್ರಸಾರ … Continued