ವಿಜಯಪುರ ಜ್ಞಾನ ಯೋಗಾಶ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

ವಿಜಯಪುರ: ಸಿಂದಗಿಯಲ್ಲಿ ಆಯೋಜನೆಗೊಂಡ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಜ್ಞಾನ ಯೋಗಾಶ್ರಮಕ್ಕೆ ಶನಿವಾರ ಭೇಟಿ ನೀಡಿದರು.
ನಡೆದಾಡುವ ದೇವರು ಪರಮಪೂಜ್ಯ ಲಿಂ.ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ ಅವರು ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಗದ್ದುಗೆಗೆ ನಮಿಸಿದರು. ಸಿದ್ದೇಶ್ವರ ಶ್ರೀಗಳು ಕೊನೆಯ ದಿನಗಳನ್ನು ಕಳೆದ ಕೋಣೆಗೆ ನಡ್ಡಾ ಭೇಟಿ ನೀಡಿ ನಮಸ್ಕರಿಸಿರು. ಆಶ್ರಮದ ಆವರಣದಲ್ಲಿಯೇ ಇರುವ ಚಿಕ್ಕ ಕೋಣೆಯಲ್ಲಿ ಶ್ರೀಗಳು ಅನಾರೋಗ್ಯ ಕಾಲದಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಕೋಣೆಗೆ ನಡ್ಡಾ ಭೇಟಿ ನೀಡಿದರು.ಈ ವೇಳೆ ಸಿದ್ದೇಶ್ವರ ಶ್ರೀಗಳು ಬರೆದ ಇಂಗ್ಲಿಷ್ ಭಾಷೆಯ ಪುಸ್ತಕವನ್ನ ನಡ್ಡಾ ಅವರಿಗೆ ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ನೀಡಿದರು.
ನಂತರ ನಾಗಠಾಣ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಹಿನ್ನೆಲೆ ಗೋಡೆ ಬರಹ, ಕರಪತ್ರ ಹಂಚಿಕೆ ಹಾಗೂ ಮಿಲ್ಡ್​ ಕಾಲ್ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಬಿಜೆಪಿ ವಿವಿಧ ಮುಖಂಡರು ಸಾಥ್ ನೀಡಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement