ಸಿಂದಗಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ನಿಧನ

ವಿಜಯಪುರ : ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿದ್ದ ಶಿವಾನಂದ ಪಾಟೀಲ ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಶನಿವಾರ ಟ್ವೀಟ್‌ ಮಾಡಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಶುಕ್ರವಾರ ರಾತ್ರಿ ಅವರು ಮೃತಪಟ್ಟಿದ್ದಾರೆ. ಶಿವಾನಂದ ಪಾಟೀಲ ಅವರು ಪತ್ನಿ, ಪುತ್ರ … Continued

ಚಿರತೆ ದಾಳಿಗೆ ಹೆದರದೆ ಮರಿಗಳಿಗೆ ಅಭೇದ್ಯ “Z ಪ್ಲಸ್‌ ರಕ್ಷಣೆ” ನೀಡಿದ ಮುಳ್ಳುಹಂದಿಗಳು : ವೀಕ್ಷಿಸಿ

ಪ್ರಾಣಿಗಳು ತಮ್ಮ ಮರಿಗಳ ವಿಷಯ ಬಂದಾಗ ಸಾಕಷ್ಟು ರಕ್ಷಣಾತ್ಮಕವಾಗಿರುತ್ತವೆ. ಎಂಥದೇ ಪ್ರಾಣಿಗಳು ಬಂದರೂ ಮರಿಗಳ ರಕ್ಷಣೆಗೆ ಮರದಾಳಿಗಳನ್ನೂ ಮಾಡುತ್ತವೆ. ಇಂಥದ್ದೇ ಘಟನೆಯೊಂದರಲ್ಲಿ ಕ್ರೂರ ಚಿರತೆ ಮತ್ತು ಮರಿಗಳಿದ್ದ ಮುಳ್ಳುಹಂದಿಗಳ ಕುಟುಂಬದ ನಡುವಿನ ಮುಖಾಮುಖಿಯನ್ನು ಸೆರೆಹಿಡಿದಿರುವ ಅಪರೂಪದ ವೀಡಿಯೊ ವೈರಲ್ ಆಗಿದೆ. ಮಕ್ಕಳ ಮೇಲಿನ ಪೋಷಕರ ಪ್ರೀತಿ ಮಾನವ ಜಗತ್ತಿಗೆ ಮಾತ್ರವಲ್ಲದೆ ಪ್ರಾಣಿ ಪ್ರಪಂಚಕ್ಕೂ ಇದೆ ಎಂಬುದನ್ನು … Continued

ಚಲಿಸುತ್ತಿರುವ ಕಾರಿನಲ್ಲಿ ಸೀಟ್‌ ಬೆಲ್ಟ್ ಧರಿಸದೇ ಇದ್ದುದಕ್ಕಾಗಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ಗೆ ದಂಡ

ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋ ಚಿತ್ರೀಕರಣ ಮಾಡುವಾಗ ಚಲಿಸುತ್ತಿರುವ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದೇ ಇದ್ದುದಕ್ಕಾಗಿ ಬ್ರಿಟನ್‌ ಪೊಲೀಸರು ಶುಕ್ರವಾರ (ಜನವರಿ 20) ಪ್ರಧಾನಿ ರಿಷಿ ಸುನಕ್‌ ಅವರಿಗೆ ದಂಡ ವಿಧಿಸಿದ್ದಾರೆ. ಸುನಕ್‌ ಅವರನ್ನು ಹೆಸರಿಸದೆ ಲಂಕಾಶೈರ್ ಪೊಲೀಸರು ಲಂಡನ್‌ನಿಂದ 42 ವರ್ಷದ ವ್ಯಕ್ತಿಗೆ ನಿಗದಿತ ದಂಡದ ಷರತ್ತುಬದ್ಧ ಪ್ರಸ್ತಾಪವನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. “ಲಂಕಾಶೈರ್‌ನಲ್ಲಿ ಚಲಿಸುವ … Continued

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಎನ್ಐಎ

ಬೆಂಗಳೂರು: ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಮೂಲಭೂತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಗೆ ಸಂಪರ್ಕ ಹೊಂದಿರುವ 20 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರೋಪಪಟ್ಟಿ ಸಲ್ಲಿಸಿದೆ. ಎನ್​ಐಎ ಶುಕ್ರವಾರ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದು, 240 ಸಾಕ್ಷಿಗಳ ಹೇಳಿಕೆಗಳು ಸೇರಿ ಒಟ್ಟು … Continued

ಕುಮಟಾ : ಮುಳುಗುತ್ತಿದ್ದ ಬೋಟ್‌ನಿಂದ 17 ಮೀನುಗಾರರ ರಕ್ಷಣೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬಳಿ ಸಮುದ್ರದಲ್ಲಿ ಮುಳಗುತ್ತಿದ್ದ ಪರ್ಸಿನ್‌ ಬೋಟ್‌ನಿಂದ 17 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಕುಮಟಾ ತಾಲುಕಿನ ಕಡ್ಲೆ ಬಳಿ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಶ್ರೀದೇವಿ ಅನುಗ್ರಹ ಹೆಸರಿನ ಬೋಟ್ ಬಂಡೆಗೆ ಬಡಿದು ಮುಳುಗಡೆಯಾಗಿದೆ. ಕರಾವಳಿ ಕಾವಲು ಪಡೆಯವರು ಹಾಗೂ ಅಕ್ಕಪಕ್ಕದ ಬೋಟ್‌ನಲ್ಲಿದ್ದವರು ಸೇರಿ ಎಲ್ಲ … Continued

ಬೊಲೆರೊ ಡಿಕ್ಕಿ: ಮೂವರು ಮಹಿಳೆಯರು ಸಾವು

ಕಾರವಾರ : ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ (55), ದುರ್ಗೆ ಕೋಲ್ಸೇಕರ್ (55), ತುಳಸಿ ಗಾವಡಾ (50) ಎಂದು ಗುರುತಿಸಲಾಗಿದೆ. ಬಿಪಿನ್‌ ತಾಳ್ವೆ ಎಂಬ … Continued

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತನಿಖೆಗೆ ಸಮಿತಿ ರಚಿಸಿದ ಐಒಎ

ನವದೆಹಲಿ: ಕುಸ್ತಿಪಟುಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ (IOA) ಶುಕ್ರವಾರ ಎಂ.ಸಿ ಮೇರಿ ಕೋಮ್ ಮತ್ತು ಯೋಗೇಶ್ವರ್ ದತ್ ಸೇರಿದಂತೆ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದು, ಇದು ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ತನಿಖೆ ಮಾಡಲಿದೆ. ಲೆಜೆಂಡರಿ ಬಾಕ್ಸರ್ ಮೇರಿ ಕೋಮ್ ಮತ್ತು … Continued