ನನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆದಿಲ್ಲ : ಗಾಯಕಿ ಮಂಗ್ಲಿ ಸ್ಪಷ್ಟನೆ

ಬಳ್ಳಾರಿ: ಬಳ್ಳಾರಿಯಲ್ಲಿ ಟಾಲಿವುಡ್ ಖ್ಯಾತ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ಕೆಲವರು ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿತ್ತು, ಆದರೆ ಈಗ ಗಾಯಕಿ ಮಂಗ್ಲಿ ಇದನ್ನು ಅಲ್ಲಗೆಳೆದಿದ್ದಾರೆ.
ತನ್ನ ಮೇಲೆ ಹಲ್ಲೆ ನಡೆದಿಲ್ಲ ಹಾಗೂ ಕಾರಿನ ಮೇಲೆ ಕಲ್ಲು ತೂರಾಟ ನಡೆದಿಲ್ಲ ಎಂದು ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುಳ್ಳು ಪ್ರಚಾರಗಳನ್ನು ನಂಬಬೇಡಿ ಎಂದು ಗಾಯಕಿ ಮನವಿ ಮಾಡಿದ್ದಾರೆ.
ಶನಿವಾರ ಬಳ್ಳಾರಿಯಲ್ಲಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದಿದೆ ಎಂಬುದು ಫೋಟೋ, ವಿಡಿಯೋ ನೋಡಿದರೆ ತಿಳಿಯುತ್ತದೆ ಎಂದರು. ಕನ್ನಡ ನಾಡಿನ ಜನತೆ ತನ್ನ ಮೇಲೆ ತೋರಿದ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಾರ್ಯಕ್ರಮದ ಆಯೋಜಕರು ಮತ್ತು ಅಧಿಕಾರಿಗಳು ನನ್ನನ್ನು ಚೆನ್ನಾಗಿ ನಡೆಸಿಕೊಂಡರು ಎಂದು ಮಂಗ್ಲಿ ಹೇಳಿದ್ದಾರೆ. ಶನಿವಾರ ಬಳ್ಳಾರಿ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆದ ಬಳ್ಳಾರಿ ಹಬ್ಬದ ಕಾರ್ಯಕ್ರಮದಲ್ಲಿ ಗಾಯಕಿ ಮಂಗ್ಲಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಕೂಡ ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲು ಎಸೆತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು, ವೇದಿಕೆ ಬಳಿಯ ಕಾರ್ ಮೇಲೆ ಯಾವುದೇ ಕಲ್ಲು ತೂರಾಟ ನಡೆದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಗ್ಲಾಸ್ ಒಡೆದ ಕಾರ್ ನಲ್ಲಿ ಮಂಗ್ಲಿ ಅವರು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾರಿನ ಮೇಲೆ ಯಾವುದೋ ಒಂದು ವಸ್ತು ಬಿದ್ದು ಗ್ಲಾಸ್ ಒಡೆದಿದೆ. ಯಾವುದೇ ಲಾಠಿ ಚಾರ್ಜ್ ಸಹ ಮಾಡಿಲ್ಲ. ಈ ರೀತಿಯ ಕಾರ್ಯಕ್ರಮದಲ್ಲಿ ಹೆಚ್ಚು ಜನ ಸೇರುವುದರಿಂದ ಕೆಲ ತೊಂದರೆಯಾಗಿದೆ. ಆದರೆ ಲಾಠಿ ಚಾರ್ಜ್‌ ನಡೆದಿದೆ. ಉತ್ಸವಕ್ಕೆ ಮೂರು ಜಿಲ್ಲೆಯ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಈ ರೀತಿಯ ಕಾರ್ಯಕ್ರಮದಲ್ಲಿ ಹೆಚ್ಚು ಜನ ಸೇರುವುದರಿಂದ ಕೆಲ ತೊಂದರೆಯಾಗಿದೆ. ಉತ್ಸವಕ್ಕೆ ಮೂರು ಜಿಲ್ಲೆಯ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು ಎಂದು ರಂಜಿತ್ ಕುಮಾರ್ ಹೇಳಿದ್ರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement